ಬ್ರೇಕಿಂಗ್ ನ್ಯೂಸ್
02-04-24 09:58 pm Bangalore Correspondent ಕರ್ನಾಟಕ
ಬೆಂಗಳೂರು, ಎ.2: ಲೋಕಸಭಾ ಚುನಾವಣೆಯಲ್ಲಿ ಎಸ್ಡಿಪಿಐ ಪಕ್ಷವು ಕಾಂಗ್ರೆಸ್ ಬೆಂಬಲಿಸಿದ್ದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕಿಡಿಕಾರಿದ್ದಾರೆ. ಇದರಲ್ಲಿ ನನಗೇನೂ ಅಚ್ಚರಿ ಕಾಣಿಸುತ್ತಿಲ್ಲ. ಕೋಮುವಾದಿ ಶಕ್ತಿಗಳು, ಭಾರತ ವಿರೋಧಿ ಶಕ್ತಿಗಳ ಜೊತೆಗೆ ಕಾಂಗ್ರೆಸ್ ಹಲವು ವರ್ಷಗಳಿಂದ ನಂಟು ಹೊಂದಿದೆ. ಎಸ್ಡಿಪಿಐ ಬೆಂಬಲ ಪಡೆಯುತ್ತೆ ಅಂದರೆ ಕಾಂಗ್ರೆಸ್ ದೇಶದ ಸಾರ್ವಭೌಮತ್ವದ ಮೇಲೆ ನಂಬಿಕೆ ಕಳಕೊಂಡಿದೆ ಎಂದರ್ಥ ಎಂದು ಟೀಕಿಸಿದ್ದಾರೆ.
ಕೇರಳದಲ್ಲಿ ಎಸ್ಡಿಪಿಐ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಯನ್ನು ಬೆಂಬಲಿಸಿದ್ದು, ರಾಜ್ಯದ ಯಾವುದೇ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದಿದೆ. ಎಸ್ಡಿಪಿಐ ಕೇರಳ ಘಟಕದ ರಾಜ್ಯಾಧ್ಯಕ್ಷ ಮೂವಾಟ್ಟುಪುಝ ಅಶ್ರಫ್ ಮೌಲವಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಕೇರಳದಲ್ಲಿ ಸ್ಪರ್ಧೆ ಮಾಡಲ್ಲ. ಆದರೆ ದೇಶದ 18 ವಿವಿಧ ಕಡೆಗಳಲ್ಲಿ ನಮ್ಮ ಅಭ್ಯರ್ಥಿ ಹಾಕಲಿದ್ದೇವೆ ಎಂದು ಹೇಳಿದ್ದಾರೆ.
ಎಸ್ಡಿಪಿಐ ಹೇಳಿಕೆ ಬಗ್ಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ರಾಮನಗರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಅಮಿತ್ ಷಾ ಅವರನ್ನು ನ್ಯೂಸ್ 18- ಸಿಎನ್ಎನ್ ಪ್ರತಿಕ್ರಿಯೆ ಕೇಳಿದಾಗ, ತನಗೇನೂ ಈ ರೀತಿಯ ಮೈತ್ರಿಯಿಂದ ಅಚ್ಚರಿಯಾಗಿಲ್ಲ ಎಂದಿದ್ದಾರೆ. ಈ ರೋಡ್ ಶೋನೇ ಎಲ್ಲವನ್ನೂ ಹೇಳುತ್ತದೆ. ಕರ್ನಾಟಕದಲ್ಲಿಯೂ ಮೋದಿಗೆ ಭರ್ಜರಿ ಬೆಂಬಲ ಸಿಗುತ್ತಿದ್ದು, ನಮ್ಮ ಅಭ್ಯರ್ಥಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು 400ಕ್ಕೂ ಹೆಚ್ಚು ಸ್ಥಾನಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಮೋದಿ ನೇತೃತ್ವದಲ್ಲಿ 11ನೇ ಸ್ಥಾನದಲ್ಲಿದ್ದ ಭಾರತದ ಆರ್ಥಿಕತೆ 5ನೇ ಸ್ಥಾನಕ್ಕೆ ತಲುಪಿದೆ. ಮೂರನೇ ಬಾರಿಗೆ ಮೋದಿ ಪ್ರಧಾನಿಯಾದರೆ, ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡಲಿದ್ದಾರೆ ಎಂದು ಅಮಿತ್ ಷಾ ಹೇಳಿದ್ದಾರೆ.
Hitting out at Congress after the Social Democratic Party of India (SDPI) offered to support the UDF in Kerala, Union Home Minister Amit Shah on Tuesday said that grand-old-party does not believe in India’s sovereignty and has been supporting anti-India campaigns for several years.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 08:46 pm
Mangalore Correspondent
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm