ಬ್ರೇಕಿಂಗ್ ನ್ಯೂಸ್
02-04-24 09:58 pm Bangalore Correspondent ಕರ್ನಾಟಕ
ಬೆಂಗಳೂರು, ಎ.2: ಲೋಕಸಭಾ ಚುನಾವಣೆಯಲ್ಲಿ ಎಸ್ಡಿಪಿಐ ಪಕ್ಷವು ಕಾಂಗ್ರೆಸ್ ಬೆಂಬಲಿಸಿದ್ದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕಿಡಿಕಾರಿದ್ದಾರೆ. ಇದರಲ್ಲಿ ನನಗೇನೂ ಅಚ್ಚರಿ ಕಾಣಿಸುತ್ತಿಲ್ಲ. ಕೋಮುವಾದಿ ಶಕ್ತಿಗಳು, ಭಾರತ ವಿರೋಧಿ ಶಕ್ತಿಗಳ ಜೊತೆಗೆ ಕಾಂಗ್ರೆಸ್ ಹಲವು ವರ್ಷಗಳಿಂದ ನಂಟು ಹೊಂದಿದೆ. ಎಸ್ಡಿಪಿಐ ಬೆಂಬಲ ಪಡೆಯುತ್ತೆ ಅಂದರೆ ಕಾಂಗ್ರೆಸ್ ದೇಶದ ಸಾರ್ವಭೌಮತ್ವದ ಮೇಲೆ ನಂಬಿಕೆ ಕಳಕೊಂಡಿದೆ ಎಂದರ್ಥ ಎಂದು ಟೀಕಿಸಿದ್ದಾರೆ.
ಕೇರಳದಲ್ಲಿ ಎಸ್ಡಿಪಿಐ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಯನ್ನು ಬೆಂಬಲಿಸಿದ್ದು, ರಾಜ್ಯದ ಯಾವುದೇ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದಿದೆ. ಎಸ್ಡಿಪಿಐ ಕೇರಳ ಘಟಕದ ರಾಜ್ಯಾಧ್ಯಕ್ಷ ಮೂವಾಟ್ಟುಪುಝ ಅಶ್ರಫ್ ಮೌಲವಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಕೇರಳದಲ್ಲಿ ಸ್ಪರ್ಧೆ ಮಾಡಲ್ಲ. ಆದರೆ ದೇಶದ 18 ವಿವಿಧ ಕಡೆಗಳಲ್ಲಿ ನಮ್ಮ ಅಭ್ಯರ್ಥಿ ಹಾಕಲಿದ್ದೇವೆ ಎಂದು ಹೇಳಿದ್ದಾರೆ.
ಎಸ್ಡಿಪಿಐ ಹೇಳಿಕೆ ಬಗ್ಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ರಾಮನಗರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಅಮಿತ್ ಷಾ ಅವರನ್ನು ನ್ಯೂಸ್ 18- ಸಿಎನ್ಎನ್ ಪ್ರತಿಕ್ರಿಯೆ ಕೇಳಿದಾಗ, ತನಗೇನೂ ಈ ರೀತಿಯ ಮೈತ್ರಿಯಿಂದ ಅಚ್ಚರಿಯಾಗಿಲ್ಲ ಎಂದಿದ್ದಾರೆ. ಈ ರೋಡ್ ಶೋನೇ ಎಲ್ಲವನ್ನೂ ಹೇಳುತ್ತದೆ. ಕರ್ನಾಟಕದಲ್ಲಿಯೂ ಮೋದಿಗೆ ಭರ್ಜರಿ ಬೆಂಬಲ ಸಿಗುತ್ತಿದ್ದು, ನಮ್ಮ ಅಭ್ಯರ್ಥಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು 400ಕ್ಕೂ ಹೆಚ್ಚು ಸ್ಥಾನಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಮೋದಿ ನೇತೃತ್ವದಲ್ಲಿ 11ನೇ ಸ್ಥಾನದಲ್ಲಿದ್ದ ಭಾರತದ ಆರ್ಥಿಕತೆ 5ನೇ ಸ್ಥಾನಕ್ಕೆ ತಲುಪಿದೆ. ಮೂರನೇ ಬಾರಿಗೆ ಮೋದಿ ಪ್ರಧಾನಿಯಾದರೆ, ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡಲಿದ್ದಾರೆ ಎಂದು ಅಮಿತ್ ಷಾ ಹೇಳಿದ್ದಾರೆ.
Hitting out at Congress after the Social Democratic Party of India (SDPI) offered to support the UDF in Kerala, Union Home Minister Amit Shah on Tuesday said that grand-old-party does not believe in India’s sovereignty and has been supporting anti-India campaigns for several years.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm