ಬ್ರೇಕಿಂಗ್ ನ್ಯೂಸ್
03-04-24 11:06 pm HK News Desk ಕರ್ನಾಟಕ
ಮೈಸೂರು, ಎ.3: ಮೈಸೂರಿನಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಲಕ್ಷ್ಮಣ್ ಅವರು ಎದುರಾಳಿ ಅಭ್ಯರ್ಥಿ ಮಹಾರಾಜ ಯದುವೀರ್ ಗಿಂತಲೂ ಶ್ರೀಮಂತ ವ್ಯಕ್ತಿ ಎಂಬುದು ಅಫಿಡವಿಟ್ ನಲ್ಲಿ ಕಾಣಿಸಿಕೊಂಡಿದೆ.
ಮಹಾರಾಜ ಯದುವೀರ್ ಅವರ ಆಸ್ತಿ ಮೌಲ್ಯ 4 ಕೋಟಿ 99 ಲಕ್ಷ ಆಗಿತ್ತು. ಲಕ್ಷ್ಮಣ್ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ ಮೌಲ್ಯ 20 ಕೋಟಿಗೂ ಅಧಿಕ ಇದೆ. ಲಕ್ಷ್ಮಣ್ ಪತ್ನಿಯೂ ಕೋಟ್ಯಾಧೀಶೆಯಾಗಿದ್ದು ಪತ್ನಿಯ ಚರಾಸ್ತಿ ಮತ್ತು ಸ್ಥಿರಾಸ್ತಿಯ ಒಟ್ಟಾರೆ ಆಸ್ತಿ ಮೌಲ್ಯ ನಾಲ್ಕು ಕೋಟಿ ಇದೆ. ಎಂ.ಲಕ್ಷ್ಮಣ್ ಕೈಯಲಿರುವ ನಗದು 6,45,000, ಲಕ್ಷ್ಮಣ್ ಪತ್ನಿ ಹೆಸರಿನಲ್ಲಿ 5,32,000 ರೂ. ನಗದು ಇದೆ.
ಲಕ್ಷ್ಮಣ್ ವಿವಿಧ ಬ್ಯಾಂಕ್ ಗಳ ಉಳಿತಾಯ ಖಾತೆಯಲ್ಲಿ 22 ಲಕ್ಷ ಹಣ ಇದೆ. ಪತ್ನಿ ಹೆಸರಿನಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ 29 ಲಕ್ಷ ಹಣ ಇದೆ. ಲಕ್ಷ್ಮಣ್ ಯಾವುದೇ ಬ್ಯಾಂಕ್ ಗಳಲ್ಲಿ ಸಾಲ ಪಡೆದಿಲ್ಲ. ಒಂದು ಸ್ವಂತ ಕಾರು ಹೊಂದಿದ್ದಾರೆ.
ಪತ್ನಿ ಬಳಿ 100 ಗ್ರಾಂ ಬಂಗಾರ ಇದೆ. ಲಕ್ಷ್ಮಣ್ ಉಳಿತಾಯ ಖಾತೆ ಹಾಗೂ ಕೈಯಲ್ಲಿರುವ ನಗದು ಸೇರಿ ಒಟ್ಟಾರೆ 4 ಕೋಟಿ 66 ಲಕ್ಷ 5 ಸಾವಿರ ಹಣ ಇದೆ. ಪತ್ನಿ ಹೆಸರಿನಲ್ಲಿ ಒಟ್ಟಾರೆ 3 ಕೋಟಿ 95 ಲಕ್ಷ ಹಣ ಇದೆ. ಲಕ್ಷ್ಮಣ್ ಮೈಸೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಎಂ.ಲಕ್ಷ್ಮಣ ಮನೆ, ಕಟ್ಟಡ ಹಾಗೂ ನಿವೇಶನದ ಆಸ್ತಿ ಮೌಲ್ಯ 15 ಕೋಟಿ ಇದೆ. ಲಕ್ಷ್ಮಣ್ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
Congress Lok Sabha candidate M. Lakshman has filed his nomination papers and declared his assets. According to the affidavit, Laxman is richer than rival candidate Maharaja Yaduveer.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm