ಬ್ರೇಕಿಂಗ್ ನ್ಯೂಸ್
06-04-24 10:42 pm HK News Desk ಕರ್ನಾಟಕ
ವಿಜಯಪುರ, ಏ 06: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ. ದಿನೇಶ್ ಗುಂಡೂರಾವ್ಗೆ ದೇಶ ವಿರೋಧಿ ಹೇಳಿಕೆ ನಿಡೋದು ಚಟವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಮೂಲಕ ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಬಿಜೆಪಿ ಪದಾಧಿಕಾರಿಯನ್ನು ಬಂಧಿಸಿದ್ದಾರೆ ಎಂದು ಪೋಸ್ಟ್ ಮಾಡಿದ್ದ ಸಚಿವರಿಗೆ ತಿರುಗೇಟು ನೀಡಿದ್ದಾರೆ.
ವಿಜಯಪುರದ ಬಿಜೆಪಿ ಕಚೇರಿ ಬಳಿ ಮಾತನಾಡಿದ ಅವರು, ನಮ್ಮ ಪದಾಧಿಕಾರಿ ಮೊಬೈಲ್ ಸಿಮ್ ವ್ಯಾಪಾರಿಗಳಿದ್ದಾರೆ. ಅವರ ಬಳಿ ಯಾರು ಬಂದಿರುತ್ತಾರೆ ಏನು ಗೊತ್ತಾಗುತ್ತದೆ. ಬಿಜೆಪಿ, ಕಾಂಗ್ರೆಸ್ ಇರಲಿ, ಯಾರೇ ಇರಲಿ ತನಿಖೆಗೆ ಸಹಕಾರ ನೀಡೋದಾಗಿ ಹೇಳಿದ್ದಾನೆ ಎಂದು ಹೇಳಿದರು.
ಕರಾವಳಿಯಲ್ಲಿ ಮೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ!
ಇನ್ನು, ಕರಾವಳಿ ಭಾಗದಲ್ಲಿ ಮೂರಕ್ಕೆ ಮೂರು ಲೋಕಸಭಾ ಕ್ಷೇತ್ರವನ್ನು ನಾವು ಗೆಲ್ಲುತ್ತೇವೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ - ಚಿಕ್ಕಮಗಳೂರು ಕ್ಷೇತ್ರಗಳನ್ನು ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಇಡೀ ದೇಶದಲ್ಲಿ ಪ್ರಧಾನಿ ನರೇಂದ್ರ ಅನಿವಾರ್ಯ ಮತ್ತು ಅವಶ್ಯ ಎಂಬುದು ಸಾಮಾನ್ಯ ಮತದಾರರಿಗೂ ಅನಿಸಿದೆ. ಕೆಲ ಕಾರ್ಯಕರ್ತರಲ್ಲಿ ವಿಚಾರದಲ್ಲಿ ಅಸಮಾಧಾನ ಇದ್ದರೂ ಸಹ ದೇಶದ ಹಿತ ದೃಷ್ಟಿಯಿಂದ ಎಲ್ಲರೂ ಒಕ್ಕಟ್ಟಾಗಿ ಬಿಜೆಪಿ ಗೆಲ್ಲಿಸುತ್ತಾರೆ. ರಾಜ್ಯದ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಹುಚ್ಚು ಶಾಸಕ ಯತ್ನಾಳ್ ;
‘ಭಾರತೀಯ ಭ್ರಷ್ಟರ ಪಾರ್ಟಿಯಲ್ಲಿ ಯತ್ನಾಳ್ ಎಂಬ ಹುಚ್ಚು ಶಾಸಕ ಬಾಯಿಗೆ ಬಂದಂತೆ ಮಾತನಾಡುತ್ತಲೇ ಇರುತ್ತಾರೆ. ಯತ್ನಾಳ್ರಂತೆ ನಾವು ಮನೆ ಒಡೆಯುವ ಕೆಲಸ, ಕೀಳು ಭಾಷೆ ಬಳಕೆ ಮಾಡುವುದಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಗೆ ‘X’ (ಟ್ವೀಟ್) ಮೂಲಕ ಪ್ರತಿಕ್ರಿಯಿಸಿರುವ ದಿನೇಶ್, ‘ಮತಾಂಧತೆಯಲ್ಲಿ ಬಿದ್ದು ಹೊರಳಾಡುತ್ತಿರುವ ಯತ್ನಾಳ್ ಮಾತೆತ್ತಿದರೆ ಪಾಕಿಸ್ತಾನ, ಪಾಕಿಸ್ತಾನ ಎನ್ನುತ್ತಾರೆ. ಅವರಿಗೆ ಪಾಕಿಸ್ತಾನದ ಮೇಲೆ ಅಷ್ಟೊಂದು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ’ ಎಂದಿದ್ದಾರೆ.
Yatnal says Dinesh Gundu Rao house half of Pakistan sparks row. Karnataka BJP MLA Basanagouda Patil Yatnal took a personal jibe at Congress leader Dinesh Gundu Rao over his remarks questioning BJP's link to the March 1 Rameshwaram Cafe blast. Referring to Gundu Rao’s marriage to Tabu Rao, a Muslim woman, Yatnal claimed that the Congress leader’s house is “half of Pakistan”.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 08:46 pm
Mangalore Correspondent
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm