ಬ್ರೇಕಿಂಗ್ ನ್ಯೂಸ್
08-04-24 01:28 pm HK News Desk ಕರ್ನಾಟಕ
ಬಳ್ಳಾರಿ, ಏ 08: ಬಳ್ಳಾರಿಯ ಬ್ರೂಸ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋಟಿ ಹಣ ಪತ್ತೆಯಾಗಿದೆ. ಜತೆಗೆ, 1.4 ಕೋಟಿ ಮೌಲ್ಯದ 3 ಕೆ.ಜಿ ಚಿನ್ನ, 42 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಮತ್ತು ಗಟ್ಟಿಗಳು ಪತ್ತೆಯಾಗಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
‘ಬಳ್ಳಾರಿ ಡಿವೈಎಸ್ಪಿ ಚಂದ್ರಕಾಂತ ನಂದ ರೆಡ್ಡಿ ಮತ್ತು ಬ್ರೂಸ್ಪೇಟೆಯ ಪೊಲೀಸ್ ಇನ್ಸ್ಪೆಕ್ಟರ್ ಎಂ.ಎನ್ ಸಿಂಧೂರ್ ಖಚಿತ ಮಾಹಿತಿ ಆಧರಿಸಿ ನಗರದ ಕಂಬಳಿ ಬಜಾರ್ನ ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಎಂಬವರ ಮನೆಯ ಮೇಲೆ ಭಾನುವಾರ ಮಧ್ಯಾಹ್ನ ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಹಣ, ಆಭರಣ ಸಿಕ್ಕವು’ ಎಂದು ಎಸ್ಪಿ ಹೇಳಿದರು.



ಈಗ ಸಿಕ್ಕಿರುವ ಹಣ ಮತ್ತು ಆಭರಣ ಚುನಾವಣೆಯಲ್ಲಿ ಹಂಚಲು ಸಂಗ್ರಹಿಸಿಟ್ಟಿದ್ದೋ, ಹವಾಲದಿಂದ ಬಂದದ್ದೋ ಅಥವಾ ನರೇಶ್ ಸೋನಿ ಅವರ ವ್ಯಾಪಾರ ವ್ಯವಹಾರಕ್ಕೆ ಸಂಬಂಧಿಸಿದ್ದೋ ಖಚಿತವಾಗಿಲ್ಲ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಎಫ್ಐಆರ್ ದಾಖಲು ಮಾಡಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಈ ವಿಷಯವನ್ನು ನಾವು ಆದಾಯ ತೆರಿಗೆ ಇಲಾಖೆಯ ಗಮನಕ್ಕೂ ತರುತ್ತೇವೆ’ ಎಂದರು.
ಹಣದ ಮೂಲದ ಬಗ್ಗೆ ಆಭರಣದಂಗಡಿ ಮಾಲೀಕ ನರೇಶ್ ಸೋನಿ ವಿಚಾರಣ ನಡೆಸಲಾಗುತ್ತಿದೆ
ಬಳ್ಳಾರಿ ನಗರ ಮತ್ತು ಗ್ರಾಮೀಣ ಕ್ಷೇತ್ರಗಳು ಕಳೆದ ವಿಧಾನಸಭಾ ಚುನಾವಣೆಯಲ್ಲಿ ‘ಹೆಚ್ಚು ವೆಚ್ಚದ ಕ್ಷೇತ್ರಗಳು’ ಎಂದು ಗುರುತಿಸಿಕೊಂಡಿದ್ದವು. ಹೀಗಾಗಿ ನಾವು ಚುನಾವಣಾ ಆಕ್ರಮಗಳ ಬಗ್ಗೆಯೂ ಹೆಚ್ಚಿನ ಜಾಗ್ರತೆ ವಹಿಸಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ.
ನರೇಶ್ ಸೋನಿ ಮತ್ತು ಜನಾರ್ದನ ರೆಡ್ಡಿ ಪಕ್ಷ ಕೆಆರ್ಪಿಪಿಯೊಂದಿಗೆ ಗುರುತಿಸಿಕೊಂಡಿದ್ದರು. ಸದ್ಯ ಕೆಆರ್ಪಿಪಿಯು ಬಿಜೆಪಿಯೊಂದಿಗೆ ವಿಲೀನಗೊಂಡಿದೆ.
Rs 5 crore cash, 106 kg jewellery seized of Hema Jewellers owner house in ballari. Police in Karnataka seized Rs 7.6 crore worth of cash, gold and silver jewellery during a raid on the house of the owner of Hema Jewellers in Kambali Bazaar in Ballari on Sunday. The seized items included Rs 5.60 crore in cash, 3 kg of gold, and 103 kg of silver jewellery with 68 silver bars.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm