ಬ್ರೇಕಿಂಗ್ ನ್ಯೂಸ್
30-11-20 12:47 pm Headline Karnataka News Network ಕರ್ನಾಟಕ
ಕಾರವಾರ, ನ.30 : ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ... ಹೀಗೆಂದು ಹೇಳಿದ್ದು ಜೆಡಿಎಸ್ ಹಿರಿಯ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ.
ಕಾರವಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು.. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಂದ್ರೆ ಜೇನುಗೂಡಿಗೆ ಕೈಇಟ್ಟಂತೆ. ಅದನ್ನು ಮಾಡಲು ಹೋಗುತ್ತಾರೆಯೇ ? ಅಪಾಯ ಮೈಮೇಲೆಳೆದುಕೊಳ್ಳಲು ತಯಾರಿದ್ದಾರೆಯೇ ಎಂದು ಮರು ಪ್ರಶ್ನೆ ಹಾಕಿದರು.

ಸಿಎಂ ಬದಲಾವಣೆಗೆ ಸ್ವಾಮೀಜಿಗಳ ಒತ್ತಡ ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಈ ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ? ರಾಜಕೀಯ ಬೇಕೆಂದರೆ ನಮ್ಮಂತೆ ಸಕ್ರಿಯ ರಾಜಕಾರಣಕ್ಕೇ ಬರಲಿ. ಹಿಂದೆ ನಿಂತು ಗುಂಡು ತೂರುವುದು ಸರಿಯಲ್ಲ. ಸ್ವಾಮೀಜಿಗಳು ಮಾಡುತ್ತಿರುವುದು ಎಳ್ಳಷ್ಟೂ ಸರಿಯಿಲ್ಲ. ಇವರೇ ಜಾತಿ ರಾಜಕಾರಣ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಲಿಂಗಾಯತ ಪರ ಹೋರಾಟ ಮಾಡಿ ಎಂದಿದ್ದರು. ಈಗ ಪಂಚಮಸಾಲಿ ಎನ್ನುತ್ತಿದ್ದಾರೆ, ಸ್ವಾಮೀಜಿಗಳು ಮಠದಲ್ಲಿ ಕುಳಿತು ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡಲಿ. ಇನ್ನೂ ಕೆಲವು ದಿನ ಯಡಿಯೂರಪ್ಪ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ.
ಅವರನ್ನು ಬದಲಾಯಿಸುವುದು ಜೇನುಗೂಡಿಗೆ ಕೈಇಟ್ಟಂತೆ ಎಂದು ಹೇಳುವ ಮೂಲಕ ಹೊರಟ್ಟಿ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಸಿಎಂ ಬದಲಿಸಬೇಕೆಂದು ವದಂತಿ ಹಬ್ಬಿಸುತ್ತಿರುವ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.
If we eliminate B.S Yediyurappa from the seat there won't be BJP government in Karnataka slammed MLC Basavaraj Horatti in Karwar
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm