ಬ್ರೇಕಿಂಗ್ ನ್ಯೂಸ್
30-11-20 12:47 pm Headline Karnataka News Network ಕರ್ನಾಟಕ
ಕಾರವಾರ, ನ.30 : ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ... ಹೀಗೆಂದು ಹೇಳಿದ್ದು ಜೆಡಿಎಸ್ ಹಿರಿಯ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ.
ಕಾರವಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು.. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಂದ್ರೆ ಜೇನುಗೂಡಿಗೆ ಕೈಇಟ್ಟಂತೆ. ಅದನ್ನು ಮಾಡಲು ಹೋಗುತ್ತಾರೆಯೇ ? ಅಪಾಯ ಮೈಮೇಲೆಳೆದುಕೊಳ್ಳಲು ತಯಾರಿದ್ದಾರೆಯೇ ಎಂದು ಮರು ಪ್ರಶ್ನೆ ಹಾಕಿದರು.

ಸಿಎಂ ಬದಲಾವಣೆಗೆ ಸ್ವಾಮೀಜಿಗಳ ಒತ್ತಡ ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಈ ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ? ರಾಜಕೀಯ ಬೇಕೆಂದರೆ ನಮ್ಮಂತೆ ಸಕ್ರಿಯ ರಾಜಕಾರಣಕ್ಕೇ ಬರಲಿ. ಹಿಂದೆ ನಿಂತು ಗುಂಡು ತೂರುವುದು ಸರಿಯಲ್ಲ. ಸ್ವಾಮೀಜಿಗಳು ಮಾಡುತ್ತಿರುವುದು ಎಳ್ಳಷ್ಟೂ ಸರಿಯಿಲ್ಲ. ಇವರೇ ಜಾತಿ ರಾಜಕಾರಣ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಲಿಂಗಾಯತ ಪರ ಹೋರಾಟ ಮಾಡಿ ಎಂದಿದ್ದರು. ಈಗ ಪಂಚಮಸಾಲಿ ಎನ್ನುತ್ತಿದ್ದಾರೆ, ಸ್ವಾಮೀಜಿಗಳು ಮಠದಲ್ಲಿ ಕುಳಿತು ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡಲಿ. ಇನ್ನೂ ಕೆಲವು ದಿನ ಯಡಿಯೂರಪ್ಪ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ.
ಅವರನ್ನು ಬದಲಾಯಿಸುವುದು ಜೇನುಗೂಡಿಗೆ ಕೈಇಟ್ಟಂತೆ ಎಂದು ಹೇಳುವ ಮೂಲಕ ಹೊರಟ್ಟಿ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಸಿಎಂ ಬದಲಿಸಬೇಕೆಂದು ವದಂತಿ ಹಬ್ಬಿಸುತ್ತಿರುವ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.
If we eliminate B.S Yediyurappa from the seat there won't be BJP government in Karnataka slammed MLC Basavaraj Horatti in Karwar
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm