ಬ್ರೇಕಿಂಗ್ ನ್ಯೂಸ್
30-11-20 12:47 pm Headline Karnataka News Network ಕರ್ನಾಟಕ
ಕಾರವಾರ, ನ.30 : ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ... ಹೀಗೆಂದು ಹೇಳಿದ್ದು ಜೆಡಿಎಸ್ ಹಿರಿಯ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ.
ಕಾರವಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು.. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಂದ್ರೆ ಜೇನುಗೂಡಿಗೆ ಕೈಇಟ್ಟಂತೆ. ಅದನ್ನು ಮಾಡಲು ಹೋಗುತ್ತಾರೆಯೇ ? ಅಪಾಯ ಮೈಮೇಲೆಳೆದುಕೊಳ್ಳಲು ತಯಾರಿದ್ದಾರೆಯೇ ಎಂದು ಮರು ಪ್ರಶ್ನೆ ಹಾಕಿದರು.

ಸಿಎಂ ಬದಲಾವಣೆಗೆ ಸ್ವಾಮೀಜಿಗಳ ಒತ್ತಡ ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಈ ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ? ರಾಜಕೀಯ ಬೇಕೆಂದರೆ ನಮ್ಮಂತೆ ಸಕ್ರಿಯ ರಾಜಕಾರಣಕ್ಕೇ ಬರಲಿ. ಹಿಂದೆ ನಿಂತು ಗುಂಡು ತೂರುವುದು ಸರಿಯಲ್ಲ. ಸ್ವಾಮೀಜಿಗಳು ಮಾಡುತ್ತಿರುವುದು ಎಳ್ಳಷ್ಟೂ ಸರಿಯಿಲ್ಲ. ಇವರೇ ಜಾತಿ ರಾಜಕಾರಣ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಲಿಂಗಾಯತ ಪರ ಹೋರಾಟ ಮಾಡಿ ಎಂದಿದ್ದರು. ಈಗ ಪಂಚಮಸಾಲಿ ಎನ್ನುತ್ತಿದ್ದಾರೆ, ಸ್ವಾಮೀಜಿಗಳು ಮಠದಲ್ಲಿ ಕುಳಿತು ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡಲಿ. ಇನ್ನೂ ಕೆಲವು ದಿನ ಯಡಿಯೂರಪ್ಪ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ.
ಅವರನ್ನು ಬದಲಾಯಿಸುವುದು ಜೇನುಗೂಡಿಗೆ ಕೈಇಟ್ಟಂತೆ ಎಂದು ಹೇಳುವ ಮೂಲಕ ಹೊರಟ್ಟಿ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಸಿಎಂ ಬದಲಿಸಬೇಕೆಂದು ವದಂತಿ ಹಬ್ಬಿಸುತ್ತಿರುವ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.
If we eliminate B.S Yediyurappa from the seat there won't be BJP government in Karnataka slammed MLC Basavaraj Horatti in Karwar
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm