ಬ್ರೇಕಿಂಗ್ ನ್ಯೂಸ್
10-04-24 04:54 pm HK NEWS ಕರ್ನಾಟಕ
ತುಮಕೂರು, ಏ 10: ನಗರದ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿನಿ ಎಂ.ಜ್ಞಾನವಿ ವಾಣಿಜ್ಯ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 600ಕ್ಕೆ 597 ಅಂಕ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಡಿ.ಎಲ್.ಮಂಜುನಾಥ್, ಡಿ.ಮಂಜುಳಾ ದಂಪತಿಯ ಪುತ್ರಿ ಜ್ಞಾನವಿ. ಕಾಲೇಜಿನ ಹಾಸ್ಟೆಲ್ನಲ್ಲಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದರು. ಪ್ರಥಮ ಪಿಯುಸಿಯಲ್ಲಿ 600ಕ್ಕೆ 600 ಅಂಕ ಗಳಿಸಿದ್ದರು.
ಜ್ಞಾನವಿ ಪೋಷಕರು ಬೀಚನಹಳ್ಳಿಯಲ್ಲಿ ಹೋಟೆಲ್ ನಡೆಸುತ್ತಿದ್ದಾರೆ. ಅವರ ಪ್ರೋತ್ಸಾಹ, ಶಿಕ್ಷಕರ ಮಾರ್ಗದರ್ಶನ, ನಿರಂತರ ಶ್ರಮದಿಂದಾಗಿ ಇಡೀ ರಾಜ್ಯದ ಜನರು ತಮ್ಮತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಓದಿನಲ್ಲಿ ಸದಾ ಮುಂದಿದ್ದ ಜ್ಞಾನವಿ ಮೇಲೆ ಪೋಷಕರು ಇಟ್ಟಿದ್ದ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.
ಹಾಸ್ಟೆಲ್ನಲ್ಲಿ ಇದ್ದುಕೊಂಡು ಅಭ್ಯಾಸ ಮಾಡಿದ್ದು ನೆರವಾಯಿತು. ಯಾವುದೇ ಒಂದು ವಿಷಯವನ್ನು ಓದಲು ಕುಳಿತರೆ ಅದು ಪೂರ್ತಿಯಾಗುವ ತನಕ ಬಿಡುತ್ತಿರಲಿಲ್ಲ. ಫಲಿತಾಂಶ ನೋಡಿ ತುಂಬಾ ಖುಷಿಯಾಗಿದೆ. ಮನೆಯಲ್ಲಿ ಹಬ್ಬದ ವಾತಾವರಣ ಇದೆ ಎಂದು ಜ್ಞಾನವಿ ನಗುತ್ತಲೇ ಮಾತನಾಡಿದರು.
ಕಾಲೇಜಿನಲ್ಲಿ ಪರೀಕ್ಷೆಯ ತಯಾರಿಗೆ ಹೆಚ್ಚಿನ ಒತ್ತು ನೀಡುತ್ತಿದ್ದರು. ವಾರ್ಷಿಕ ಪರೀಕ್ಷೆಗೂ ಮುನ್ನ 8 ಪೂರ್ವಭಾವಿ ಪರೀಕ್ಷೆಗಳು ನಡೆಸಿದ್ದರು. ಇದಕ್ಕೆ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದೆ. ಕೊನೆಯ ಪರೀಕ್ಷೆಗೆ ಇದರಿಂದ ಅನುಕೂಲವಾಯಿತು ಎಂದು ತಮ್ಮ ಯಶಸ್ಸಿನ ಗುಟ್ಟು ತಿಳಿಸಿದರು.
ಜ್ಞಾನವಿ ಚಾರ್ಟೆಡ್ ಅಕೌಟೆಂಟ್ ಆಗುವ ಕನಸು ಕಂಡಿದ್ದು, ಇದೇ ಮಾರ್ಗದಲ್ಲಿ ಸಾಗಿದ್ದಾರೆ. ವಿದ್ಯಾವಾಹಿನಿ ಕಾಲೇಜಿನಲ್ಲಿ ಚಾರ್ಟೆಡ್ ಅಕೌಟೆಂಟ್ ಕೋರ್ಸ್ಗೆ ದಾಖಲಾಗುವ ಇಂಗಿತ ವ್ಯಕ್ತಪಡಿಸಿದರು. ಪೋಷಕರು ಹಾಕಿಕೊಟ್ಟ ಮಾರ್ಗದಲ್ಲಿ ಮುಂದೆ ಸಾಗುತ್ತಿದ್ದಾರೆ. ವಿದ್ಯಾಭ್ಯಾಸಕ್ಕಾಗಿ ತುಮಕೂರಿಗೆ ಬಂದವರು ತಮ್ಮ ಕೆಲಸದಲ್ಲಿ ಶೇ 100ರಷ್ಟು ಯಶಸ್ಸು ಸಾಧಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
In the Commerce stream, Ganavi M from Vidyanidhi PU College, Tumkur, attained the highest position with a remarkable score of 597 marks.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm