ಬ್ರೇಕಿಂಗ್ ನ್ಯೂಸ್
10-04-24 06:19 pm HK News Desk ಕರ್ನಾಟಕ
ವಿಜಯಪುರ, ಏ 10: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗ ಕನ್ನಡ ಮಾಧ್ಯಮದಲ್ಲಿ ವಿಜಯಪುರ ನಗರದ ಎಸ್.ಎಸ್. ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಲಬೀಳಗಿ ಗ್ರಾಮದವರಾದ ವೇದಾಂತ ನಾವಿ ವಿಜಯಪುರ ನಗರದ ಶಾಸ್ತ್ರಿನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇದ್ದುಕೊಂಡು ಎಸ್.ಎಸ್. ಪಿಯು ಕಾಲೇಜಿನಲ್ಲಿ ಓದಿದರು.
ರಾಜ್ಯಕ್ಕೆ ಪ್ರಥಮ ಬರುತ್ತೇನೆ ಎಂಬ ನಿರೀಕ್ಷೆ ಇರಲಿಲ್ಲ, ಖುಷಿಯಾಗಿದೆ. ಓದಿಗಾಗಿ ಹೆಚ್ಚು ಸಮಯ ಮೀಸಲಿಟ್ಟಿರಲಿಲ್ಲ. ಅವಕಾಶ ಸಿಕ್ಕಾಗ ಓದುತ್ತಿದ್ದೆ. ಯಾವುದೇ ಟ್ಯೂಷನ್ಗೆ ಹೋಗಿಲ್ಲ, ಪ್ರತಿ ದಿನ ಕಾಲೇಜಿನಲ್ಲಿ ಮಾಡುವ ಪಾಠಗಳನ್ನು ಅಂದಂದೆ ಓದಿಕೊಳ್ಳುತ್ತಿದ್ದೆ’ ಎಂದು ವೇದಾಂತ ತಿಳಿಸಿದರು.
ಪದವಿ ಓದಿದ ಬಳಿಕ ಐಎಎಸ್, ಕೆಎಎಸ್ನಂತಹ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆದ್ಯತೆ ನೀಡುತ್ತೇನೆ ಎಂದು ಹೇಳಿದರು.
ಕ್ಷೌರಿಕ ಕೆಲಸ ಮಾಡುತ್ತಿದ್ದ ತಂದೆ ಕೋವಿಡ್ ಸಂದರ್ಭದಲ್ಲಿ ತೀರಿಕೊಂಡ ಪರಿಣಾಮ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಯಿತು. ಬಡತನದಲ್ಲೇ ತಾಯಿ, ಅಕ್ಕ ನೀಡಿದ ಸಹಕಾರ ಹಾಗೂ ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನದಿಂದ ಹೆಚ್ಚು ಅಂಕಗಳಿಸಲು ಸಹಾಯವಾಯಿತು ಎಂದು ವೇದಾಂತ ತಿಳಿಸಿದರು.
ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವೇದಾಂತ ನಾವಿ ಅವರನ್ನು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲ್ ಅವರು ಸಿಹಿ ತಿನ್ನಿಸಿ, ಸನ್ಮಾನಿಸಿ ಶುಭ ಹಾರೈಸಿದರು.
ಕಲಬೀಳಗಿಯ ಬಂಜಾರ ವಿದ್ಯಾ ವರ್ದಕ ಸಂಘದ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಓದಿರುವ ವೇದಾಂತ ನಾವಿ ಶೇ 96.96 ರಷ್ಟು ಅಂಕಗಳಿಸಿ, ಉತ್ತಮ ಸಾಧನೆ ಮಾಡಿದ್ದರು.
The Arts stream of the 2nd PUC annual examination has been conducted in Kannada medium by S.S. Vedanta Gyanoba Navi, a student of PU College, topped the state with 596 marks.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm