ಬ್ರೇಕಿಂಗ್ ನ್ಯೂಸ್
11-04-24 09:55 pm HK NEWS ಕರ್ನಾಟಕ
ಬೆಂಗಳೂರು, ಎ.11: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆಯೆಂಬ ಟೀಕೆ, ಆ ಬಗ್ಗೆ ಎಫ್ಐಆರ್ ದಾಖಲಾದ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್, ಹೇಳಿಕೆ ನೀಡುವಾಗ ನಾನು ಯಾವುದೇ ಸ್ತ್ರೀಲಿಂಗ, ಪುಲ್ಲಿಂಗ ಬಳಸಿಲ್ಲ. ಅದನ್ನ ಅವರಿಗೆ (ತಬು ರಾವ್) ಅಂದಿರುವುದಾಗಿ ತಿಳಿದುಕೊಂಡ್ರೆ ಯತ್ನಾಳ್ ಏನೂ ಮಾಡಕಾಗಲ್ಲ. ಕುಂಬಳಕಾಯಿ ಕಳ್ಳ ಅಂದ್ರೆ ಅವರು ಹೆಗಲು ಮುಟ್ಟಿಕೊಂಡು ನೋಡಿದರೆ ಏನು ಮಾಡೋದು ಎಂದು ವ್ಯಂಗ್ಯವಾಡಿದ್ದಾರೆ.
ನಿಮ್ಮ ಮನೆ ಅಂದ್ರೆ ಯಾವುದು? ಅವರ ಮನೆ ಹೇಗಿದೆ ಅಂತಾ ಯಾರಿಗೆ ಗೊತ್ತು. ಕಾಂಗ್ರೆಸ್ ಮನೆಯಲ್ಲಿ ಇರುವವರು ಅರ್ಧ ಪಾಕಿಸ್ತಾನ ಏಜೆಂಟ್ರಿದ್ದಾರೆ. ಕಾಂಗ್ರೆಸ್ಸಿಗರು ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನು ಸಮರ್ಥಿಸಿಕೊಂಡಿದ್ದರು. ಅದಕ್ಕೆ ಕಾಂಗ್ರೆಸ್ ಅರ್ಧ ಪಾಕಿಸ್ತಾನ ಇದೆ ಅಂತ ಹೇಳಿದ್ದೆ. ದಿನೇಶ್ ಗುಂಡೂರಾವ್ ಮನೆಯಂದ್ರೆ, ಕಾಂಗ್ರೆಸ್ ಮನೆ ಎಂದರ್ಥ ಎಂಬುದಾಗಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್, ಅದು ಒಂದು ದುರಂತ. ಪ್ರಣಾಳಿಕೆಯಲ್ಲಿ 370 ಕಲಂ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ. ಅಂದ್ರೆ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಅಂತ ಇವರು ಭಾವಿಸಿಲ್ಲ. ಅಲ್ಪಸಂಖ್ಯಾತರಿಗಾಗಿ ವಿಶೇಷ ಕಾನೂನು ಮಾಡುತ್ತೇವೆ ಅನ್ನುತ್ತಾರೆ. ಮುಸ್ಲಿಂ ಪರವಾಗಿ ವಿಶೇಷ ಕಾನೂನು ಮಾಡ್ತಾರೆ ಅಂದ್ರೆ 5 ವರ್ಷದಲ್ಲಿ ಪಾಕಿಸ್ತಾನ ಮಾಡ್ತಾರಾ ಎಂದು ಪ್ರಶ್ನೆ ಮಾಡಿದರು.
ಇವರಿಗೆ ಮಾನ ಮರ್ಯಾದೆ ಇದೆಯಾ? ಒಂದಾದ್ರೂ ಹಿಂದುಗಳ ಪರವಾಗಿ ಏನಾದ್ರೂ ಮಾಡಿದ್ದೀರಾ? ಅಯೋಧ್ಯ ರಾಮನಿಗೆ ವಿರೋಧ ಮಾಡಿದ ನಾಲಾಯಕರು ಕಾಂಗ್ರೆಸ್ಸಿಗರು ಎಂದು ವಾಗ್ದಾಳಿ ನಡೆಸಿದರು.
ಈಶ್ವರಪ್ಪ ತಮ್ಮ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ ಫೋಟೋ ಹಾಕಿದ್ದಕ್ಕೆ ವಿರೋಧ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಧಾನಿ ಮೋದಿ ಫೋಟೋ ಹಾಕಲು ಯಾರದೂ ತಕರಾರು ಇಲ್ಲ. ಅವರು ಇಡೀ ಜಗತ್ತಿನ ನಾಯಕರಿದ್ದಾರೆ. ನಾನು ಮೋದಿ ಫ್ಯಾನ್ ಇದ್ದೇನೆ ಅಂದ್ರೆ ಏನು ಮಾಡಕಾಗಲ್ಲ. ಮೋದಿ ಪೋಟೋ ಹಾಕಲು ನಾನು ವಿರೋಧ ಮಾಡಲ್ಲ ಎಂದು ಈಶ್ವರಪ್ಪ ಪರ ಬ್ಯಾಟ್ ಬೀಸಿದರು.
BJP MLA Yatnal half Pakistan, says it was not for dinesh gundu rao wife. The Bengaluru police recently booked BJP Bijapur MLA Basanagouda Patil Yatnal for allegedly referring to Karnataka Health Minister Dinesh Gundu Rao’s house as ‘half Pakistan’.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm