ಬ್ರೇಕಿಂಗ್ ನ್ಯೂಸ್
12-04-24 03:29 pm HK NEWS ಕರ್ನಾಟಕ
ಬೆಂಗಳೂರು, ಏ 12: ತಮಿಳುನಾಡಿನ ಧರ್ಮಪುರಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್ಟೇಬಲ್ಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಹಾಗೂ ಮತ್ತೊಬ್ಬ ಕಾನ್ಸ್ಟೇಬಲ್ ಗಾಯಗೊಂಡಿದ್ದಾರೆ.
ಕರ್ನಾಟಕ ಮೀಸಲು ಪಡೆಯ ಕೋರಮಂಗಲದಲ್ಲಿರುವ 3ನೇ ಬೆಟಾಲಿಯನ್ನ 3ನೇ ಸಹಾಯಕ ಕಮಾಂಡೆಂಟ್ ಟಿ.ಪ್ರಭಾಕರ್ ಮತ್ತು ವಿಜಯಪುರದ ಐಆರ್ಬಿ (ಇಂಡಿಯನ್ ರಿಸರ್ವ್ ಬೆಟಾಲಿಯನ್)ನ ಕಾನ್ಸ್ಟೇಬಲ್ ವಿಠಲ್ ಗಡಾಧರ್, ತಮಿಳುನಾಡಿನ ಮೀಸಲು ಪಡೆಯ ಕಾನ್ಸ್ಟೇಬಲ್ ದಿನೇಶ್ ಎಂಬವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಜಯಪುರದ ಐಆರ್ಬಿ ಡೆಪ್ಯೂಟಿ ಕಮಾಂಡೆಂಟ್ ಯು.ಎನ್.ಹೇಮಂತ್ ಕುಮಾರ್ ಮತ್ತು ಕಾನ್ಸ್ಟೇಬಲ್ ಜಯಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕೆಎಸ್ಆರ್ಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
10 ದಿನಗಳ ಹಿಂದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್ಆರ್ಪಿಯ ತುಕಡಿಯನ್ನು ತಮಿಳುನಾಡಿನ ಧರ್ಮಪುರಿಗೆ ನಿಯೋಜಿಸಲಾಗಿತ್ತು. ಅದಕ್ಕೆ ಹೇಮಂತ್ ಕುಮಾರ್ ಮುಂದಾಳತ್ವ ವಹಿಸಿದ್ದರು. ಗುರುವಾರ ಸಂಜೆ 5.30ರ ಸುಮಾರಿಗೆ ತಿರುವಣ್ಣಾಮಲೈನಿಂದ ದಿಂಡಿವಣ್ಣಂ ಕಡೆಗೆ ಜೀಪ್ನಲ್ಲಿ ಐವರು ಅಧಿಕಾರಿ ಮತ್ತು ಸಿಬ್ಬಂದಿ ತೆರಳುತ್ತಿದ್ದರು. ಕಮಾಂಡೆಂಟ್ ಪ್ರಭಾಕರ್ ಜೀಪ್ನ ಮುಂಭಾಗ ಕುಳಿತಿದ್ದರು. ಹಿಂಭಾಗದಲ್ಲಿ ಕಾನ್ಸ್ಟೇಬಲ್ ವಿಠಲ್, ಡೆಪ್ಯೂಟಿ ಕಮಾಂಡೆಂಟ್ ಹೇಮಂತ್ ಹಾಗೂ ತಮಿಳುನಾಡಿನ ಸಿಬ್ಬಂದಿ, ಕಾನ್ಸ್ಟೇಬಲ್ ಇದ್ದರು.
ಮಾರ್ಗ ಮಧ್ಯೆ ಅತಿ ವೇಗವಾಗಿ ಬಂದ ತಮಿಳುನಾಡಿನ ಬಸ್ ಇವರ ಜೀಪಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಭಾಕರ್, ವಿಠಲ್, ತಮಿಳುನಾಡಿನ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಕೆಎಸ್ಆರ್ಪಿಯ ಹಿರಿಯ ಅಧಿಕಾರಿ ಭೀಮಪ್ಪ ಎಂಬವರನ್ನು ನಿಯೋಜಿಸಲಾಗಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಬಳಿಕ ಅಧಿಕಾರಿ-ಸಿಬ್ಬಂದಿಯ ಮರಣೋತ್ತರ ಪರೀಕ್ಷೆ ಹಾಗೂ ಮೃತದೇಹಗಳನ್ನು ರಾಜ್ಯಕ್ಕೆ ತರುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಕೆಎಸ್ಆರ್ಪಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
A KSRP police officer on duty from Karnataka is killed in a road accident in Tamil Nadu. The deceased has been identified as Hemanth Kumar from Vijayapura. He was on his way to the election duty in Tamil Nadu
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm