ಬ್ರೇಕಿಂಗ್ ನ್ಯೂಸ್
12-04-24 03:29 pm HK NEWS ಕರ್ನಾಟಕ
ಬೆಂಗಳೂರು, ಏ 12: ತಮಿಳುನಾಡಿನ ಧರ್ಮಪುರಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್ಟೇಬಲ್ಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಹಾಗೂ ಮತ್ತೊಬ್ಬ ಕಾನ್ಸ್ಟೇಬಲ್ ಗಾಯಗೊಂಡಿದ್ದಾರೆ.
ಕರ್ನಾಟಕ ಮೀಸಲು ಪಡೆಯ ಕೋರಮಂಗಲದಲ್ಲಿರುವ 3ನೇ ಬೆಟಾಲಿಯನ್ನ 3ನೇ ಸಹಾಯಕ ಕಮಾಂಡೆಂಟ್ ಟಿ.ಪ್ರಭಾಕರ್ ಮತ್ತು ವಿಜಯಪುರದ ಐಆರ್ಬಿ (ಇಂಡಿಯನ್ ರಿಸರ್ವ್ ಬೆಟಾಲಿಯನ್)ನ ಕಾನ್ಸ್ಟೇಬಲ್ ವಿಠಲ್ ಗಡಾಧರ್, ತಮಿಳುನಾಡಿನ ಮೀಸಲು ಪಡೆಯ ಕಾನ್ಸ್ಟೇಬಲ್ ದಿನೇಶ್ ಎಂಬವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಜಯಪುರದ ಐಆರ್ಬಿ ಡೆಪ್ಯೂಟಿ ಕಮಾಂಡೆಂಟ್ ಯು.ಎನ್.ಹೇಮಂತ್ ಕುಮಾರ್ ಮತ್ತು ಕಾನ್ಸ್ಟೇಬಲ್ ಜಯಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕೆಎಸ್ಆರ್ಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
10 ದಿನಗಳ ಹಿಂದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್ಆರ್ಪಿಯ ತುಕಡಿಯನ್ನು ತಮಿಳುನಾಡಿನ ಧರ್ಮಪುರಿಗೆ ನಿಯೋಜಿಸಲಾಗಿತ್ತು. ಅದಕ್ಕೆ ಹೇಮಂತ್ ಕುಮಾರ್ ಮುಂದಾಳತ್ವ ವಹಿಸಿದ್ದರು. ಗುರುವಾರ ಸಂಜೆ 5.30ರ ಸುಮಾರಿಗೆ ತಿರುವಣ್ಣಾಮಲೈನಿಂದ ದಿಂಡಿವಣ್ಣಂ ಕಡೆಗೆ ಜೀಪ್ನಲ್ಲಿ ಐವರು ಅಧಿಕಾರಿ ಮತ್ತು ಸಿಬ್ಬಂದಿ ತೆರಳುತ್ತಿದ್ದರು. ಕಮಾಂಡೆಂಟ್ ಪ್ರಭಾಕರ್ ಜೀಪ್ನ ಮುಂಭಾಗ ಕುಳಿತಿದ್ದರು. ಹಿಂಭಾಗದಲ್ಲಿ ಕಾನ್ಸ್ಟೇಬಲ್ ವಿಠಲ್, ಡೆಪ್ಯೂಟಿ ಕಮಾಂಡೆಂಟ್ ಹೇಮಂತ್ ಹಾಗೂ ತಮಿಳುನಾಡಿನ ಸಿಬ್ಬಂದಿ, ಕಾನ್ಸ್ಟೇಬಲ್ ಇದ್ದರು.
ಮಾರ್ಗ ಮಧ್ಯೆ ಅತಿ ವೇಗವಾಗಿ ಬಂದ ತಮಿಳುನಾಡಿನ ಬಸ್ ಇವರ ಜೀಪಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಭಾಕರ್, ವಿಠಲ್, ತಮಿಳುನಾಡಿನ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಕೆಎಸ್ಆರ್ಪಿಯ ಹಿರಿಯ ಅಧಿಕಾರಿ ಭೀಮಪ್ಪ ಎಂಬವರನ್ನು ನಿಯೋಜಿಸಲಾಗಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಬಳಿಕ ಅಧಿಕಾರಿ-ಸಿಬ್ಬಂದಿಯ ಮರಣೋತ್ತರ ಪರೀಕ್ಷೆ ಹಾಗೂ ಮೃತದೇಹಗಳನ್ನು ರಾಜ್ಯಕ್ಕೆ ತರುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಕೆಎಸ್ಆರ್ಪಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
A KSRP police officer on duty from Karnataka is killed in a road accident in Tamil Nadu. The deceased has been identified as Hemanth Kumar from Vijayapura. He was on his way to the election duty in Tamil Nadu
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm