ಬ್ರೇಕಿಂಗ್ ನ್ಯೂಸ್
17-04-24 06:55 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.17: ಧಾರವಾಡದ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ತೆಯಾದ 18 ಕೋಟಿ ನಗದು ಹಣ ಪ್ರಕರಣದಲ್ಲಿ ಐಟಿ ಅಧಿಕಾರಿಗಳ ತನಿಖೆ ಅಂತ್ಯಗೊಂಡಿದ್ದು ಹಣದ ಕಂತೆಯನ್ನು 18 ಬ್ಯಾಗ್ಗಳಲ್ಲಿ ತುಂಬಿಸಿ ಹುಬ್ಬಳ್ಳಿ ಕೇಶ್ವಾಪುರದ ಎಸ್ಬಿಐ ಶಾಖೆಗೆ ರವಾನಿಸಿದ್ದಾರೆ.
ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇದ್ದ ಬಸವರಾಜ್ ದತ್ತುನವರ್ ನಿವಾಸ ಅರ್ನಾ ರೆಸಿಡೆನ್ಸಿಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಪ್ರಾರಂಭಿಸಿದ್ದರು. ನಿನ್ನೆಯಿಂದ ಹಣದ ಮಶಿನ್ ತಂದು ಹಣದ ಎಣಿಕೆ ನಡೆಸಿದ್ದು ಇಂದು ಮಧ್ಯಾಹ್ನ ಹೊತ್ತಿಗೆ ಪೂರ್ತಿಯಾಗಿದೆ. ಅಕ್ರಮ ಮದ್ಯ ಸಂಗ್ರಹಿಸಿದ್ದಾರೆ ಎನ್ನುವ ಮಾಹಿತಿ ಮೇರೆಗೆ ದಾಳಿ ನಡೆದಿತ್ತು. ಚುನಾವಣಾ ವಿಚಕ್ಷಣ ದಳ ದಾಳಿ ನಡೆಸಿದ್ದು ಈ ವೇಳೆ ದತ್ತೂನವರ ಮನೆಯಲ್ಲಿ ಕಂತೆ ಕಂತೆ ನಗದು ಪತ್ತೆಯಾಗಿತ್ತು. ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದರಿಂದ ಐಟಿ ಅಧಿಕಾರಿಗಳು ನಿನ್ನೆ ರಾತ್ರಿಯೇ ಪ್ರಕರಣವನ್ನು ತಮ್ಮ ಸುಪರ್ದಿಗೆ ಪಡೆದಿದ್ದರು. ಹಣ ಎಣಿಸಿ 18 ಬ್ಯಾಗ್ ಗಳಲ್ಲಿ ಪ್ಯಾಕ್ ಮಾಡಿ ಬ್ಯಾಂಕಿಗೆ ಸಾಗಿಸಿದ್ದಾರೆ.

ಇದೇ ವೇಳೆ, ಬಸವರಾಜ್ ದತ್ತುನವರ್ ಅವರನ್ನು ವಿಚಾರಣೆ ನಡೆಸಿದ್ದು ತಾನು ಯು.ಬಿ. ಶೆಟ್ಟಿ ಕನಸ್ಟ್ರಕ್ಷನ್ ಕಂಪನಿಯಲ್ಲಿ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದ. ಈ ಹಿನ್ನೆಲೆ ಹುಬ್ಬಳ್ಳಿಯ ಕಂಪನಿ ಕಚೇರಿಯಲ್ಲಿಯೂ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಉದ್ಯಮಿ ಮತ್ತು ಹುಬ್ಬಳ್ಳಿ ಭಾಗದಲ್ಲಿ ಕಂಟ್ರಾಕ್ಟರ್ ಆಗಿರುವ ಯುಬಿ ಶೆಟ್ಟಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದು ಧಾರವಾಡ ಮತ್ತು ಹುಬ್ಬಳ್ಳಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಈ ಹಣ ಕೂಡಿಡಲಾಗಿತ್ತು ಎಂಬ ಆರೋಪಗಳಿವೆ.
ಯು.ಬಿ. ಶೆಟ್ಟಿ ಕಚೇರಿಯಲ್ಲಿ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು, 18 ಕೋಟಿ ಹಣದ ಮೂಲದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಹಣ ಯಾರಿಗೆ ಸೇರಿದ್ದು, ಬಸವರಾಜ್ ದತ್ತುನವರ್ ಮನೆಯಲ್ಲಿ ಹಣ ಹೇಗೆ ಬಂತು? ಅಷ್ಟೊಂದು ದೊಡ್ಡ ಮೊತ್ತದ ಹಣ ಮನೆಯಲ್ಲಿ ಇಟ್ಟುಕೊಂಡಿದ್ದು ಏಕೆ? ಇದು ಯಾರಿಗೆ ಸೇರಿದ್ದು ಎನ್ನುವ ಬಗ್ಗೆ ತನಿಖೆ ಆರಂಭಿಸಿದ್ದಾರೆ.
Income Tax (I-T) officials seized Rs 18 crore during a raid from the house of U B Shetty’s accountant Basavaraja Dutunavar at Aarna Residency near Dasanakoppa Circle here. The seized money was later deposited at State Bank of India (SBI) Keshwapur branch in Hubballi.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm