ಬ್ರೇಕಿಂಗ್ ನ್ಯೂಸ್
17-04-24 07:50 pm Bangalore Correspondent ಕರ್ನಾಟಕ
ಬೆಂಗಳೂರು, ಏ.17: YouTube ವೀವ್ಸ್ ಹೆಚ್ಚಿಸಿಕೊಳ್ಳಲು ಏನೇನೋ ಮಾಡಿದರೆ ಕೇಸ್ ಬೀಳೋದು ಪಕ್ಕಾ. ಯಾಕೆಂದರೆ ಇಲ್ಲೊಬ್ಬ ಯುವಕ ಏರ್ಪೋರ್ಟ್ನಲ್ಲಿ ವಿಡಿಯೊ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೊ ಶೂಟ್ ಮಾಡಿದ ಯುಟ್ಯೂಬರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಯುಟ್ಯೂಬ್ ಚಾನೆಲ್ನಲ್ಲಿ ವೀವ್ಸ್ ಹೆಚ್ಚಿಸಿಕೊಳ್ಳುವ ಭರದಲ್ಲಿ ನಿಯಮ ಮೀರಿ ವಿಡಿಯೊ ಮಾಡಿದ್ದರಿಂದ ಯುವಕನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ, ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಯಲಹಂಕ ಮೂಲದ ಯುಟ್ಯೂಬರ್ ವಿಕಾಸ್ ಗೌಡ ಬಂಧಿತ. ಏರ್ಪೋರ್ಟ್ ರನ್ ವೇ ಚಿತ್ರೀಕರಣ ಮಾಡಿ ಯುಟ್ಯೂಬರ್ ಸಿಕ್ಕಿಹಾಕಿಕೊಂಡಿದ್ದು, ಟಿಕೆಟ್ ಇಲ್ಲದೆ ಒಳಗಡೆ ಹೋಗಿದ್ದೆ, 24 ಗಂಟೆ ರನ್ ವೇ ಬಳಿಯೇ ಇದ್ದೆ ಎಂದು ವಿಡಿಯೊದಲ್ಲಿ ಯುವಕ ಹೇಳಿಕೊಂಡಿದ್ದಾನೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರಿಂದ ಸಿಐಎಸ್ಎಫ್ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಏರ್ಪೋರ್ಟ್ ಠಾಣೆ ಪೊಲೀಸರು ಯುಟ್ಯೂಬರ್ ವಿಕಾಸ್ ಗೌಡನನ್ನು ಬಂಧಿಸಿದ್ದಾರೆ.
ವಿಡಿಯೊ ಮಾಡುವ ವೇಳೆ ಟಿಕೆಟ್ ಪಡೆಯದೆ ಒಳಗೆ ಹೋಗಿರುವುದಾಗಿ ಯುವಕ ಹೇಳಿಕೊಂಡಿದ್ದ. ಆದರೆ, ಪೊಲೀಸರ ವಿಚಾರಣೆ ವೇಳೆ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿರುವುದಾಗಿ ಹೇಳಿದ್ದಾನೆ. ಟಿಕೆಟ್ ಪಡೆದು ಪ್ರಯಾಣ ಮಾಡದೇ ಯುವಕ ರನ್ ವೇನಲ್ಲಿ ಉಳಿದುಕೊಂಡಿದ್ದ. ಸುಮಾರು ನಾಲ್ಕೈದು ಗಂಟೆಗಳ ಕಾಲ ಅಲ್ಲೇ ಇದ್ದು, ವಿಡಿಯೊ ಮಾಡಿಕೊಂಡು ಬಂದಿದ್ದ.
ಎಲ್ಲಾ ಅಧಿಕಾರಿ, ಸಿಬ್ಬಂದಿ ಕಣ್ತಪ್ಪಿಸಿ ಏರ್ಪೋರ್ಟ್ ಪ್ರವೇಶ ಮಾಡಿದ್ದಾಗಿ ವಿಡಿಯೋ ಮಾಡಿದ್ದರಿಂದ ವಿಕಾಸ್ನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 23-year-old YouTuber has been arrested and booked by Bengaluru airport police for breaching airport security under the pretext of travelling from Bengaluru to Chennai. The YouTuber uploaded a video on April 12 on his YouTube channel, mocking the security inside Kempegowda International Airport. He will face stringent legal action as entering a sensitive area like an airport is not acceptable, said sources.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm