ಬ್ರೇಕಿಂಗ್ ನ್ಯೂಸ್
01-12-20 01:57 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.1: ನಮ್ಮಿಂದ ಸಹಾಯ ಪಡೆದು, ಸರಕಾರ ರಚಿಸಿಕೊಂಡು ಅಧಿಕಾರ ಅನುಭವಿಸುತ್ತಿರುವ ಮಂದಿ ನನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ಬರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ನಾನೇನು ಸಚಿವ ಸ್ಥಾನಕ್ಕೆ ಕಾಯುತ್ತಿರುವ ಮನುಷ್ಯ ಅಲ್ಲ. ರಾಜಕಾರಣವನ್ನು ವ್ಯವಹಾರದ ರೂಪದಲ್ಲಿ ತೆಗೆದುಕೊಂಡವನೂ ನಾನಲ್ಲ. ಸಾಂಸ್ಕೃತಿಕ ಹೋರಾಟದ ಪ್ರತೀಕವಾಗಿ ರಾಜಕೀಯ ಮಾಡುತ್ತಾ ಬಂದವನು. ಸಚಿವನಾಗಿ, ಶಾಸಕನಾಗಿ ನನ್ನ ಕಾರ್ಯ ವೈಖರಿ ಜನರಿಗೆ ಗೊತ್ತಿದೆ. ಆದರೆ ನನ್ನ ಕಷ್ಟಕಾಲದಲ್ಲಿ ಎಲ್ಲರೂ ಕೈಬಿಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಕೋರ್ ಕಮಿಟಿ ಮೊದಲ ಪಟ್ಟಿ ಕಳುಹಿಸಿದ್ದಾಗ ನನ್ನ ಹೆಸರಿತ್ತು. ಆದರೆ, ಆಬಳಿಕ ಪಟ್ಟಿಯಲ್ಲಿ ಹೆಸರು ಮಾಯವಾಗಿತ್ತು. ಇದು ಹೇಗಾಯ್ತು ಎನ್ನುವುದು ನನಗೆ ತಿಳಿದಿಲ್ಲ. ನನ್ನ ಹೆಸರನ್ನು ಯಾಕಾಗಿ ಪಟ್ಟಿಯಿಂದ ತೆಗೆಸಿದರು ಎನ್ನುವುದೂ ತಿಳಿದಿಲ್ಲ ಎಂದು ಪರೋಕ್ಷವಾಗಿ ಸಂಘ ಪರಿವಾರದ ವಿರುದ್ಧ ಅಸಮಾಧಾನ ತೋಡಿಕೊಂಡರು. ಹೈಕೋರ್ಟ್ ತೀರ್ಪು ಸಚಿವ ಸ್ಥಾನಕ್ಕೆ ಮಾತ್ರ ಸೀಮಿತ. ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೊಂದರೆಯಿಲ್ಲ.
ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಅವರು, ಹಾಗೆ ನೋಡಿದರೆ ಆರಂಭದಲ್ಲಿ ಸಂಘ ಪರಿವಾರದ ಬೆಂಬಲ ಸಿಕ್ಕಿತ್ತು. ಈಗ ಕಷ್ಟಕಾಲದಲ್ಲಿ ಮಾತ್ರ ನೆರವು ಸಿಗಲಿಲ್ಲ. ಅಡ್ವೊಕೇಟ್ ಜನರಲ್ ಕೂಡ ಅನಾದರ ತೋರಿದರು ಎಂದು ಹೇಳಿಕೊಂಡರು.
ಈ ಬಗ್ಗೆ ಯಡಿಯೂರಪ್ಪ ಅವರೊಡನೆ ಮಾತುಕತೆ ನಡೆಸುತ್ತೇನೆ. ನನ್ನ ಜೊತೆಗೆ ಬಿಜೆಪಿಗೆ ಬಂದವರೆಲ್ಲ ನನ್ನ ಜೊತೆಗಿದ್ದಾರೆ. ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಸೇರಿ ಹಲವರು ಫೋನ್ ಮಾಡಿ ವಿಚಾರಿಸಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm