ಬ್ರೇಕಿಂಗ್ ನ್ಯೂಸ್
18-04-24 06:42 pm HK News Desk ಕರ್ನಾಟಕ
ಮಂಡ್ಯ, ಎ.18: ಪತಿಯ ಮೇಲಿನ ದ್ವೇಷದಿಂದ ತಾಯಿಯೇ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ತನ್ನ ಪತಿ ಪ್ರಸನ್ನ ಮೇಲಿನ ಕೋಪದಲ್ಲಿ ಮಕ್ಕಳಿಗೆ ವಿಷ ಉಣಿಸಿದ್ದಾಳೆ. ತ್ರಿಶುಲ್ ಮತ್ತು ತ್ರಿಶಾ ಎಂಬ ಅವಳಿ ಮಕ್ಕಳು ಹಾಗೂ ಇನ್ನೊಬ್ಬ ಮಗಳು ಬೃಂದಾಗೆ ನಿನ್ನೆ ರಾತ್ರಿ ವಿಷ ಉಣಿಸಿದ್ದಳು. ಇಂದು ಬೆಳಗ್ಗೆ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಐಸ್ ಕ್ರೀಂ ತಿಂದು ಮಕ್ಕಳು ಅಸುನೀಗಿದ್ದಾರೆ ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ನಿಜ ವಿಚಾರ ಬಯಲಾಗಿದೆ.
ಪೂಜಾ ಮತ್ತು ಆಕೆಯ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಜಗಳದಿಂದ ಬೇಸತ್ತ ಪೂಜಾ ನಿನ್ನೆ ಮಕ್ಕಳಿಗೆ ವಿಷ ಉಣಿಸಿ ತಾನೂ ತಿಂದಿದ್ದಳು. ಮನೆಯಲ್ಲಿ ಜಿರಳೆಗೆ ಹಾಕುತ್ತಿದ್ದ ಲಕ್ಷ್ಮಣ ರೇಖೆಯನ್ನು ಊಟಕ್ಕೆ ಹಾಕಿ ಮಕ್ಕಳಿಗೆ ತಿನ್ನಿಸಿದ್ದಳು. ಅಸ್ವಸ್ಥರಾಗಿದ್ದ ಪೂಜಾ ಮತ್ತು ಮಕ್ಕಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಸಾವನ್ನಪ್ಪಿದ್ದು ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ನೀಡಲಾಗುತ್ತಿದೆ.
In a shocking incident, a mother allegedly poisoned her twin daughters and tried to commit suicide in Mandya.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am