ಬ್ರೇಕಿಂಗ್ ನ್ಯೂಸ್
18-04-24 06:42 pm HK News Desk ಕರ್ನಾಟಕ
ಮಂಡ್ಯ, ಎ.18: ಪತಿಯ ಮೇಲಿನ ದ್ವೇಷದಿಂದ ತಾಯಿಯೇ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ತನ್ನ ಪತಿ ಪ್ರಸನ್ನ ಮೇಲಿನ ಕೋಪದಲ್ಲಿ ಮಕ್ಕಳಿಗೆ ವಿಷ ಉಣಿಸಿದ್ದಾಳೆ. ತ್ರಿಶುಲ್ ಮತ್ತು ತ್ರಿಶಾ ಎಂಬ ಅವಳಿ ಮಕ್ಕಳು ಹಾಗೂ ಇನ್ನೊಬ್ಬ ಮಗಳು ಬೃಂದಾಗೆ ನಿನ್ನೆ ರಾತ್ರಿ ವಿಷ ಉಣಿಸಿದ್ದಳು. ಇಂದು ಬೆಳಗ್ಗೆ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಐಸ್ ಕ್ರೀಂ ತಿಂದು ಮಕ್ಕಳು ಅಸುನೀಗಿದ್ದಾರೆ ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ನಿಜ ವಿಚಾರ ಬಯಲಾಗಿದೆ.
ಪೂಜಾ ಮತ್ತು ಆಕೆಯ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಜಗಳದಿಂದ ಬೇಸತ್ತ ಪೂಜಾ ನಿನ್ನೆ ಮಕ್ಕಳಿಗೆ ವಿಷ ಉಣಿಸಿ ತಾನೂ ತಿಂದಿದ್ದಳು. ಮನೆಯಲ್ಲಿ ಜಿರಳೆಗೆ ಹಾಕುತ್ತಿದ್ದ ಲಕ್ಷ್ಮಣ ರೇಖೆಯನ್ನು ಊಟಕ್ಕೆ ಹಾಕಿ ಮಕ್ಕಳಿಗೆ ತಿನ್ನಿಸಿದ್ದಳು. ಅಸ್ವಸ್ಥರಾಗಿದ್ದ ಪೂಜಾ ಮತ್ತು ಮಕ್ಕಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಸಾವನ್ನಪ್ಪಿದ್ದು ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ನೀಡಲಾಗುತ್ತಿದೆ.
In a shocking incident, a mother allegedly poisoned her twin daughters and tried to commit suicide in Mandya.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm