ಬ್ರೇಕಿಂಗ್ ನ್ಯೂಸ್
19-04-24 11:17 pm HK NEWS ಕರ್ನಾಟಕ
ಹುಬ್ಬಳ್ಳಿ , ಏ 19: ವಿದ್ಯಾರ್ಥಿನಿ ಕೊಲೆ ಘಟನೆ ಖಂಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್, ಕಾಲೇಜು ಕ್ಯಾಂಪಸ್ಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ಹಾಡ ಹಗಲೇ ಕೊಲೆ ಪ್ರಕರಣ ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಘಟನೆ ಕುರಿತು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಾಳಿ ಬದುಕಬೇಕಿದ್ದ ವಿದ್ಯಾರ್ಥಿನಿಯನ್ನು ಯುವಕ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಕ್ರೌರ್ಯ ಮೆರೆದಿದ್ದಾನೆ. ಯುವಕ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದು, ಚಾಕು ಹಾಕಲು ಎಲ್ಲಿಯೋ ತರಬೇತಿ ಪಡೆದಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದರು.
ಕೊಲೆ ಆರೋಪಿ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸಬೇಕು. ಅಲ್ಲದೇ ಆತನ ಕುಟುಂಬದವರನ್ನು ಬಹಿಷ್ಕರಿಸುವಂತೆ ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಬೇಕು. ಆರೋಪಿ ಪರವಾಗಿ ಕೋರ್ಟ್ನಲ್ಲಿ ಯಾರೂ ವಕಾಲತ್ತು ವಹಿಸಬಾರದು ಎಂದು ಮುತಾಲಿಕ್ ಆಗ್ರಹಿಸಿದರು.

ಮನೆ ಬಿಟ್ಟು ಹೊರಗೆ ಬಾರದಂಥಾ ಪರಿಸ್ಥಿತಿ ಇದೆ: ಯತ್ನಾಳ್
ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಮನೆ ಬಿಟ್ಟು ಹೊರಗೆ ಬಾರದ ಪರಿಸ್ಥಿತಿ ಇದೆ ಎಂದು ಶಾಸಕ ಯತ್ನಾಳ್ ಆರೋಪ ಮಾಡಿದರು. ಹತ್ಯೆಯಾದ ನೇಹಾ ನಿರಂಜನ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಬಾರದ ಪರಿಸ್ಥಿತಿ ಇದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೊಲೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಪರಮೇಶ್ವರ್ ಬೇಜವಾಬ್ದಾರಿತನದ ಹೇಳಿಕೆ ನೀಡ್ತಾರೆ. ಗೃಹ ಸಚಿವರಿಗೆ ಮಾನ ಮರ್ಯಾದೆ ಇದೆಯಾ? ಘಟನೆ ಬಗ್ಗೆ ಯಾವುದೇ ಮಾಹಿತಿ ತೆಗೆದುಕೊಳ್ಳದೇ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದರು.
Hubballi Neha Murder, Pramod Muthalik demands to destroy the house of the accused. The way he has stabbed her, it seems like he has taken ISIS training. Meanwhile, Yatnal also visited the house of Neha and expressed his condolences to the family.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm