ಬ್ರೇಕಿಂಗ್ ನ್ಯೂಸ್
01-12-20 09:37 pm Dilip: Bengaluru Correspondent ಕರ್ನಾಟಕ
ಬೆಂಗಳೂರು, ಡಿ.1: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎನ್ನುವ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವತಃ ಬೆಳ್ಳಂದೂರು ಠಾಣೆಗೆ ಆಗಮಿಸಿರುವ ವರ್ತೂರು ಪ್ರಕಾಶ್, ಡ್ರೈವರ್ ಜೊತೆಗೆ ಇದ್ದಾಗ ಕೆಲವರು ನಮ್ಮ ಕಾರಿನಲ್ಲೇ ನಮ್ಮನ್ನು ಅಪಹರಿಸಿದ್ದರು. ಅಲ್ಲದೆ, ನಮ್ಮ ಮೇಲೆ ಹಲ್ಲೆ ನಡೆಸಿ 30 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರು. ಆದರೆ, ನಾನು ಹೇಗೋ ಅವರಿಂದ ತಪ್ಪಿಸಿಕೊಂಡೆ ಎಂದು ದೂರಿನಲ್ಲಿ ಹೇಳಿದ್ದಾರೆ.
ನವೆಂಬರ್ 25 ರಂದು ನಮ್ಮನ್ನು 7 ರಿಂದ 8 ಜನ ಅಪಹರಿಸಿದ್ದಾರೆ. ಅಪಹರಣದ ನಂತರ ಮೂರು ದಿನ ನನ್ನನ್ನು ಕೂಡಿ ಹಾಕಲಾಗಿತ್ತು. ಆದರೆ, ಎಲ್ಲಿ ಕೂಡಿ ಹಾಕಿದ್ದರು ಎಂಬುದು ಗೊತ್ತಿಲ್ಲ. ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಲಾಗಿತ್ತು. ನನ್ನ ಡ್ರೈವರ್ಗೂ ತುಂಬಾ ಗಾಯಗಳಾಗಿವೆ. 28ರಂದು ನಾನು ಹಾಗೂ ಡ್ರೈವರ್ ತಪ್ಪಿಸಿಕೊಂಡು ಬಂದಿದ್ದೇವೆ. ಆದರೆ, ನಮ್ಮ ಕಾರನ್ನು ಕಿಡ್ನಾಪರ್ಸ್ ಇದ್ದ ಸ್ಥಳದಲ್ಲಿಯೇ ಬಿಟ್ಟು ಬಂದಿದ್ದೀವಿ ಎಂದು ಉಲ್ಲೇಖಿಸಲಾಗಿದೆ.
ವರ್ತೂರು ಪ್ರಕಾಶ್ ಕೊಟ್ಟ ದೂರಿನನ್ವಯ ಬೆಳ್ಳಂದೂರು ಪೊಲೀಸರು ಇದೀಗ ಐಪಿಸಿ ಸೆಕ್ಷನ್ 341 ಅಕ್ರಮ ತಡೆ , 342 ಅಕ್ರಮ ಬಂಧನ, 307 ಕೊಲೆ ಯತ್ನ, 364 ಅಪಹರಣ, 364(A) ಅಪಹರಿಸಿ ಹಣಕ್ಕಾಗಿ ಬೇಡಿಕೆ ಮತ್ತು 324 ಹಲ್ಲೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಆದರೆ, ಮಾಜಿ ಸಚಿವರೊಬ್ಬರ ಅಪಹರಣದ ಸುದ್ದಿ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.
Shocking Former Karnataka Minister Varthur Prakash alleges of kidnap and extortion, files complaint at Bellandur Police station in Bangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm