ಬ್ರೇಕಿಂಗ್ ನ್ಯೂಸ್
21-04-24 05:42 pm Bangalore Correspondent ಕರ್ನಾಟಕ
ಮಂಗಳೂರು, ಎ.21: ರೌಡಿಗಳ ಜತೆ ಹಣದ ವ್ಯವಹಾರದ ಹೊಂದಿದ್ದ ಆರೋಪದಲ್ಲಿ ಬೆಂಗಳೂರು ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕೆಲವು ದಿನಗಳ ಹಿಂದೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾರತ್ತಹಳ್ಳಿ ರೌಡಿ ರೋಹಿತ್ನನ್ನು ವಿಚಾರಣೆ ನಡೆಸಿದಾಗ ಖಾಕಿ ನಂಟು ಬಯಲಾಗಿದೆ. ಇಲಾಖಾ ಮಟ್ಟದ ವಿಚಾರಣೆ ನಡೆಸಿದ ಸಿಸಿಬಿ ಡಿಸಿಪಿ ಅವರು, ಸಿಸಿಬಿ ಓಸಿಡಬ್ಲ್ಯು ದಳದ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದರು.
ಸಿಸಿಬಿಯ ಓಸಿಡಬ್ಲ್ಯು ದಳದ ಪೂರ್ವ ವಿಭಾಗದಲ್ಲಿ ಜ್ಯೋರ್ತಿಲಿಂಗ ಕಾರ್ಯ ನಿರ್ವಹಿಸುತ್ತಿದ್ದರು. ಮಾರತ್ತಹಳ್ಳಿ ರೌಡಿ ರೋಹಿತ್ ಮೇಲೆ ಕೊಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ ಲೋಕಸಭಾ ಚುನಾವಣಾ ನಿಮಿತ್ತ ನಗರದ ರೌಡಿಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದರು. ಅಲ್ಲದೆ ರೌಡಿಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಶೋಧ ಮಾಡಿದ್ದರು. ಆದರೆ ರೋಹಿತ್ ಪತ್ತೆಯಾಗಿರಲಿಲ್ಲ.
ರೋಹಿತ್ನನ್ನು ಕರೆದು ವಿಚಾರಣೆ ನಡೆಸುವಂತೆ ಅಧಿಕಾರಿಗಳಿಗೆ ಸಿಸಿಬಿ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ಸೂಚಿಸಿದ್ದರು. ಅದರಂತೆ ಆತನನ್ನು ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆಸಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ರೌಡಿ ಮೊಬೈಲನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಇನ್ಸ್ ಪೆಕ್ಟರ್ ಜ್ಯೋತಿರ್ಲಿಂಗ ಜತೆ ನಿಕಟ ನಂಟು ಇರುವುದು ಬೆಳಕಿಗೆ ಬಂದಿತ್ತು. ಹಲವು ಬಾರಿ ಪಿಐ ಜ್ಯೋತಿರ್ಲಿಂಗ ಅವರಿಗೆ ರೌಡಿ ರೋಹಿತ್ ಹಣ ಕೊಟ್ಟಿರುವುದು ತಿಳಿದುಬಂದಿದ್ದು ಅದರಂತೆ ಡಿಸಿಪಿ ವರದಿ ಆಧರಿಸಿ ಬೆಂಗಳೂರು ಕಮಿಷನರ್ ಅಮಾನತು ಆದೇಶ ಮಾಡಿದ್ದಾರೆ.
ಜ್ಯೋತಿರ್ಲಿಂಗ ಈ ಹಿಂದೆ ಮಂಗಳೂರಿನ ಬರ್ಕೆ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು. ಆ ಸಂದರ್ಭದಲ್ಲಿಯೂ ಇವರ ಮೇಲೆ ಅವ್ಯವಹಾರ, ಬಾರ್, ಪಬ್ ಸೇರಿದಂತೆ ಹೆಚ್ಚಿನ ಕಡೆಗಳಿಂದ ಹಣ ಪಡೆದ ಆರೋಪ ಕೇಳಿಬಂದಿತ್ತು.
Bangalore Jyotirlinga ccb inspector suspended for alleged nexus with rowdy sheeter. Jyotirlinga was a circle inspector at Barke police station in Mangalore. The senior police officer explained that Jyotirlinga was suspected of aiding Rohith, who operates within the Whitefield jurisdiction, in his illegal activities and receiving substantial sums of money from him.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm