ಬ್ರೇಕಿಂಗ್ ನ್ಯೂಸ್
25-04-24 09:57 pm HK News Desk ಕರ್ನಾಟಕ
ಕೊಪ್ಪಳ, ಏ 25: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿರುವ ಹೊತ್ತಿನಲ್ಲಿ ರಾಜಕಾರಣಿಗಳ ಮಾತಿನ ಭರಾಟೆ ಕೂಡ ಜೋರಾಗಿ ನಡೆಯುತ್ತಿದೆ. ಇದೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದ್ದು, ಈಗ ಮತ್ತೊಂದು ಹಂತ ತಲುಪಿದೆ.
ಇತ್ತಿಚಿಗೆ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ವೇಳೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನರೇಂದ್ರ ಮೋದಿ ಹೆಸರು ಹೇಳುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವ ಸಚಿವ ಶಿವರಾಜ ತಂಗಡಗಿಯನ್ನು ಮಂತ್ರಿ ಎನ್ನಬೇಕೊ, ಕಂತ್ರಿ ಎನ್ನಬೇಕೋ ಎಂದು ಪ್ರಶ್ನಿಸಿದ್ದರು. ಜನಾರ್ದನ ರೆಡ್ಡಿ ಅವರ ಈ ಹೇಳಿಕೆ ಆಡಳಿತ ಮತ್ತು ವಿಪಕ್ಷದವರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿತ್ತು.
ಶಾಸಕ ಜನಾರ್ದನ ರೆಡ್ಡಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಾನು ಮನಸ್ಸು ಮಾಡಿದರೆ ರೆಡ್ಡಿ ಇತಿಹಾಸ ಬಿಚ್ಚಿಡುತ್ತೇನೆ. ನನ್ನ ವೈಯಕ್ತಿಕ ಬದುಕಿನ ವಿಚಾರಗಳ ಬಗ್ಗೆ ಮಾತನಾಡಿದರೆ ನಿಮ್ಮನ್ನು ಎಲ್ಲಿ ಬೇಕಾದರೂ ಬೆತ್ತಲೆಯಾಗಿ ನಿಲ್ಲಿಸುವೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲಿ ಈ ಇಬ್ಬರು ನಾಯಕರ ನಡುವಿನ ವಾಕ್ಸಮರ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನವು ಏಪ್ರಿಲ್ 26ರಂದು ಜರುಗಲಿದ್ದು, ಎರಡಣೇ ಹಂತದ ಮತದಾನವು ಮೇ 07ರಂದು ನಡೆಯಲಿದೆ.
ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ;
ಸಚಿವ ಶಿವರಾಜ್ ತಂಗಡಗಿ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಲಘು ಹೇಳಿಕೆ ನೀಡಿದ್ದಾರೆ. ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ಆ ಭಗವಂತನಿಗೆ ಗೊತ್ತು! ಅಂತ ರೆಡ್ಡಿ ಹೇಳಿದ್ದಾರೆ. ಹೀಗೆ ಮೋದಿ ವಿರುದ್ದ ಸಚಿವ ಶಿವರಾಜ್ ತಂಗಡಗಿ ಮಾತನಾಡಿದ್ರೆ, ಜನ್ರು ಮಂತ್ರಿ ಅಂತ ಕರೆಯೊಲ್ಲ ಕಂತ್ರಿ ಎಂದೇ ಕರೆಯುತ್ತಾರೆ ಅಂತ ಟೀಕಿಸಿದ್ದಾರೆ.
Shivaraj Tangadagi says will make Janardhana Reddy naked publically. This statement was made by Tangadagi after Reddy made a controversy remark on shivaraj.
04-03-26 05:06 pm
HK News Staffer
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm