ಬ್ರೇಕಿಂಗ್ ನ್ಯೂಸ್
25-04-24 10:57 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 25: ನೇಹಾ ಹಿರೇಮಠ ಕೊಲೆಯಾಗಿ ಒಂದು ವಾರದ ಬಳಿಕ ಕೊನೆಗೂ ಆಕೆ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಇದೇ ವೇಳೆ ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದರು.
ಹುಬ್ಬಳ್ಳಿಯಲ್ಲಿನ ನೇಹಾ ನಿವಾಸಕ್ಕೆ ಗುರುವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ, ನೇಹಾ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ''ಇದೊಂದು ದುರಾದೃಷ್ಟಕರ ಘಟನೆ. ಈ ಪ್ರಕರಣವನ್ನು ಈಗಾಗಲೇ ನಾವು ಸಿಐಡಿಗೆ ಕೊಟ್ಟಿದ್ದೇವೆ. ಆರೋಪಿಯನ್ನು ಬಂಧಿಸಲಾಗಿದೆ. ಸಿಐಡಿ ತನಿಖೆ ಆರಂಭಗೊಂಡಿದೆ'' ಎಂದರು.

ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ನಾಯಕರ ಆಗ್ರಹದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ''ನೇಹಾ ಹತ್ಯೆಯಲ್ಲಿ ಬಿಜೆಪಿಯು ರಾಜಕೀಯ ಮಾಡುತ್ತಿದೆ. ಇಲ್ಲಿಯವರೆಗೆ ಅವರು ಒಂದು ಪ್ರಕರಣವನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ? ನಮ್ಮ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಿದ್ದೇವೆ'' ಎಂದು ತಿರುಗೇಟು ನೀಡಿದರು.
'ನೇಹಾ ಕುಟುಂಬದ ಜೊತೆಗೆ ನಾವು ಇರುತ್ತೇವೆ. ಅವರಿಗೆ ರಕ್ಷಣೆ ಬೇಕಿದ್ದರೂ ಕೊಡುತ್ತೇವೆ. ಸಿಐಡಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸುತ್ತಾರೆ. ನಂತರ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಆದಷ್ಟು ಬೇಗ ನ್ಯಾಯಾಲಯದಲ್ಲಿ ಆರೋಪಿಗೆ ಗರಿಷ್ಠ ಶಿಕ್ಷೆ ಆಗುತ್ತದೆ. ಧೈರ್ಯವಾಗಿರಿ, 120 ದಿನಗಳೊಳಗೆ ನ್ಯಾಯ ಕೊಡಿಸೋಣ' ಎಂದು ಸಿಎಂ ನೇಹಾ ತಂದೆಯ ಬೆನ್ನು ತಟ್ಟಿದರು.
ಸಿಎಂ ಎದುರು ನಿರಂಜನ ಹಿರೇಮಠ ಬೇಡಿಕೆ:
ಇದೇ ವೇಳೆ ಮಗಳ ಸಾವಿಗೆ ನ್ಯಾಯ ಬೇಕೆಂದು ನೇಹಾ ತಂದೆ ನಿರಂಜನ ಹಿರೇಮಠ ಸಿಎಂ ಬಳಿ ಕೋರಿದರು. ಇದೇ ವೇಳೆ ಮಾತನಾಡಿದ ಅವರು, ''ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ವಿಶೇಷ ನ್ಯಾಯಾಲಯದಲ್ಲಿ 90-120 ದಿನಗಳ ಒಳಗಾಗಿ ನ್ಯಾಯ ಸಿಗಬೇಕು. ಸಾವಿಗೆ ಸಾವೇ ಶಿಕ್ಷೆ ಆಗಬೇಕು'' ಎಂದು ಬೇಡಿಕೆ ಇಟ್ಟರು.
ಫಯಾಜ್ನನ್ನು ಗಲ್ಲಿಗೇರಿದ ಮೇಲೆಯೇ ನಮಗೆ ಸಮಾಧಾನ, ಅಲ್ಲಿಯವರೆಗೆ ಹೋರಾಟ ಮಾಡುತ್ತೇವೆ. ಸರ್ಕಾರ ನಮ್ಮ ಜೊತೆಗೆ ಇರಬೇಕು. ಸಿಎಂ ನಮ್ಮ ಜೊತೆಗೆ ಇದ್ದು ನ್ಯಾಯ ಒದಗಿಸಬೇಕೆಂದು ಮನವಿ ಮಾಡುತ್ತೇನೆ. ಸಿಐಡಿ ತನಿಖೆಗೆ ಒಪ್ಪಿಸಿದ್ದು ಸಂತೋಷ ತಂದಿದೆ. ಕಾಂಗ್ರೆಸ್ ಮುಖಂಡರು ನಮ್ಮ ಬೆನ್ನಿಗೆ ನಿಂತಿದ್ದಾರೆ. ಕೋಪದಲ್ಲಿ ಯಾರಿಗಾದರೂ ನೋವು ತರುವ ಹಾಗೆ ಮಾತನಾಡಿದರೆ ಕ್ಷಮೆ ಕೋರುತ್ತೇನೆ ಎಂದು ಭಾವುಕರಾದರು.
ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಸಂತೋಷ ಲಾಡ್, ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಶಾಸಕ ಪ್ರಸಾದ್ ಅಬ್ಬಯ್ಯ, ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Karnataka Chief Minister Siddaramaiah on Thursday visited Neha Hiremath's house and offered condolences to her family members. Neha Hiremath (23), daughter of Congress councilor of Hubballi-Dharwad Muncipal Corporation Niranjan Hiremath, was stabbed to death on the campus of BVB College on April 18 by her former classmate Fayaz Khondunaik.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm