ಬ್ರೇಕಿಂಗ್ ನ್ಯೂಸ್
26-04-24 04:53 pm HK News Desk ಕರ್ನಾಟಕ
ಚಾಮರಾಜನಗರ, ಏ, 26: ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು ಇದೀಗ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
ಇಂದು ರಾಜ್ಯದ 14 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮತಗಟ್ಟೆಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೇ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ ಘಟನೆ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
ಮೂಲಸೌಕರ್ಯಕ್ಕೆ ಆಗ್ರಹಿಸಿ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ 5 ಗ್ರಾಮಗಳ ಜನರು ಮತದಾನ ಬಹಿಷ್ಕಾರ ಮಾಡಿದ್ದರು. ಬಳಿಕ ಅಧಿಕಾರಿಗಳು ಮನವೊಲಿಕೆಗೆ ತೆರಳಿದ್ದ ವೇಳೆ ತಾವು ಮತದಾನ ಮಾಡಲ್ಲವೆಂದು ಗ್ರಾಮಸ್ಥರೆಲ್ಲ ಸೇರಿ ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ.
ಘಟನೆಗೆ ಕಾರಣವೇನು?:
ಮಲೆ ಮಹದೇಶ್ವರ ಗ್ರಾಮ ಪಂಚಾಯಿತಿಗೆ ಸೇರಿದ ಇಂಡಿಗನತ್ತ, ಮೆಂದಾರೆ, ತುಳಿಸಿಕರೆ, ತೇಕಣೆ, ಪಡಸಲನತ್ತ ಈ ಗ್ರಾಮಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸದೆ ಮತದಾರರು ದೂರ ಉಳಿದಿದ್ದರು.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತುಳಿಸಿಕರೆಯ 480 ಮತದಾರರು, ಇಂಡಿಗನತ್ತ ಪೋಡಿನ 528 ಮತದಾರರು, ಪಡಸಲನತ್ತ ಪೋಡಿನ 298 ನಿವಾಸಿಗಳು ಮತದಾನದಿಂದ ದೂರ ಉಳಿದಿದ್ದರು. ತಮಗೆ ಮೂಲಸೌಕರ್ಯ ಕೊಡಬೇಕು ಇಲ್ಲದಿದ್ದರೇ ತಾವು ಮತ ಹಾಕುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ವಿಚಾರ ಅರಿತ ಪೊಲೀಸ್ ಸಿಬ್ಬಂದಿ, ಚುನಾವಣಾ ಅಧಿಕಾರಿಗಳು ಮತದಾರರನ್ನು ಮನವೊಲಿಸಲು ತೆರಳಿದ್ದರು. ಈ ವೇಳೆ ಕೆಲವರನ್ನು ಮತದಾನಕ್ಕೆ ಮನವೊಲಿಸಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಧ್ಚಂಸ ಮಾಡಿ, ಇವಿಎಂ ಹೊಡೆದು ಹಾಕಿ, ಕಲ್ಲು ತೂರಿದ್ದಾರೆ. ಈ ವೇಳೆ ಅಲ್ಲಿದ್ದ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Angry over politicians for no development in Village, angry people destroy Poll Booth In Chamarajanagar by villagers.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm