ಬ್ರೇಕಿಂಗ್ ನ್ಯೂಸ್
28-04-24 03:09 pm Bangalore Correspondent ಕರ್ನಾಟಕ
ಬೆಂಗಳೂರು, ಎ.28: ಹಾಸನದಲ್ಲಿ ಹೊರಬಿದ್ದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಪೆನ್ ಡ್ರೈವ್ ಬಗ್ಗೆ ವ್ಯಂಗ್ಯ ಪ್ರಶ್ನೆಯನ್ನು ಎತ್ತಿದ್ದಾರೆ. ಕುಮಾರಸ್ವಾಮಿ ಅವರು ಕಳೆದ ಚುನಾವಣೆ ವೇಳೆಗೆ ತೋರಿಸುತ್ತಿದ್ದ ಪೆನ್ ಡ್ರೈವ್ ಯಾವುದು, ಅದರಲ್ಲಿ ಏನಿದೆ ಎಂಬುದು ಆಗ ನನಗೆ ಗೊತ್ತಿರಲಿಲ್ಲ. ಅದರಲ್ಲಿ ಏನಿದೆ ಎಂದು ಈಗ ಗೊತ್ತಾಯಿತು. ಈ ಪೆನ್ ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಚೆನ್ನಾಗಿ ಗೊತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಕುಮಾರಣ್ಣ ಅವರು ತಮ್ಮ ಜೇಬಿನಲ್ಲೇ ಪೆನ್ ಡ್ರೈವ್ ಇಟ್ಟುಕೊಂಡಿದ್ದನ್ನು ಮಾಧ್ಯಮದವರಿಗೆ ತೋರಿಸಿದ್ದರು. ಹೀಗಾಗಿ ಇದರ ಬಗ್ಗೆ ಕುಮಾರಸ್ವಾಮಿ ಅವರನ್ನೇ ನೀವು ಕೇಳಬೇಕು. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ ಎಂದು ಹೇಳಿದರು. ಮಾಧ್ಯಮಗಳು ಈ ವಿಚಾರದಲ್ಲಿ ಸುಳ್ಳು ಹೇಳುತ್ತಿವೆ. ಅದು ಬರೀ ಹಾಸನದ ನಾಯಕನದಲ್ಲ. ಹಾಸನ ಲೋಕಸಭಾ ಕ್ಷೇತ್ರದ ಎಡಿಎ ಮೈತ್ರಿ ಕೂಟದ ಅಭ್ಯರ್ಥಿಯದ್ದು, ಸಂಸದನದ್ದು. ಹೀಗಾಗಿ ಈ ವಿಚಾರವಾಗಿ ಪ್ರಧಾನಮಂತ್ರಿಗಳು, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ತನದ ಬಗ್ಗೆ ಮಾತನಾಡುತ್ತಿದ್ದ ಅಶ್ವತ್ಥ್ ನಾರಾಯಣ್ ಉತ್ತರ ನೀಡಬೇಕು. ನಮ್ಮ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಅವರೇ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಮಹಿಳಾ ಆಯೋಗದ ಅಧ್ಯಕ್ಷರು ಇದೆಲ್ಲವನ್ನು ನೋಡಿ ರಾಜ್ಯದ ಗೃಹ ಸಚಿವರು ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ನೀವು (ಮಾಧ್ಯಮದವರು) ಯಾಕೆ ಮೌನ ತಾಳುತ್ತಿದ್ದೀರಿ? ಈ ವಿಚಾರದಲ್ಲಿ ನೀವು ರಾಜ್ಯದ ಜನತೆಗೆ ಬೆಳಕು ಚೆಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.
ಸಂತ್ರಸ್ತ ಮಹಿಳೆಯರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಬಹುಮುಖ್ಯ ಆಧಾರಸ್ತಂಭ. ನೀವು ನಿಮ್ಮ ನಡುವಣ ಪೈಪೋಟಿ, ಆಂತರಿಕ ವಿಚಾರಕ್ಕೆ, ಬೇರೆಯವರಿಗೆ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಇಂತಹ ದೊಡ್ಡ ವಿಚಾರಗಳನ್ನು ಮುಚ್ಚಿ ಹಾಕುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಭಾವಿಸುತ್ತೇನೆ. ನಮ್ಮ ಆತ್ಮಸಾಕ್ಷಿಗಾದರೂ ನಾವು ಕೆಲಸ ಮಾಡಬೇಕು ಅಲ್ಲವೇ ಎಂದರು.
DK shivakumar slams Prajwal Revanna over his sex leaked videos, says that the pen drive kumarswami was showing was of Prajwal Revanna he added.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm