ಬ್ರೇಕಿಂಗ್ ನ್ಯೂಸ್
29-04-24 06:34 pm HK News Desk ಕರ್ನಾಟಕ
ರಾಮನಗರ, ಏ.29: ಬೆಂಗಳೂರಿನಿಂದ ಕನಕಪುರದ ಮೇಕೆದಾಟು ನೋಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಗಳು ಕಾಲು ಜಾರಿ ನದಿಯಲ್ಲಿ ಸಾವನ್ನಪ್ಪಿದ್ದಾರೆ.
ಇವರನ್ನು ಪೀಣ್ಯಾ ಸೆಕೆಂಡ್ ಸ್ಟೇಜ್ನ ಇಂಜಿನಿಯರಿಂಗ್ ಕಾಲೇಜ್ನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಒಟ್ಟು 12 ಜನ ವಿದ್ಯಾರ್ಥಿಗಳು ಪ್ರವಾಸ ಬಂದಿದ್ದರಂತೆ, ಈ ಪೈಕಿ 5 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅದೃಷ್ಟವಶಾತ್ 7 ವಿದ್ಯಾರ್ಥಿಗಳು ಬದುಕುಳಿದಿದ್ದಾರೆ ಎಂದು ದೃಢವಾಗಿದೆ.
ಬೇಸಿಗೆಯ ಬಿಸಿ ತಾಳಲಾರದೆ, ಈ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾವೇರಿ ನದಿ ಹರಿಯುವ ಸಂಗಮಕ್ಕೆ ಪ್ರವಾಸ ಕೈಗೊಂಡಿದ್ದರು. ಅದೇ ರೀತಿ ಇದರಲ್ಲಿ 12 ಜನ ವಿದ್ಯಾರ್ಥಿಗಳು, ಟಿಟಿ ವಾಹನದಲ್ಲಿ ಮೇಕೆದಾಟಿಗೆ ತೆರಳಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮೇಕೆದಾಟು ನೋಡಲೆಂದು ಹೋಗಿದ್ದ 12 ಕಾಲೇಜು ವಿದ್ಯಾರ್ಥಿಗಳ ಪೈಕಿ 5 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಅಭಿಷೇಕ್, ತೇಜಸ್, ಹರ್ಷಿತ್, ವರ್ಷಾ, ನೇಹ ಸಾವನ್ನಪ್ಪಿರುವ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಕನಕಪುರದ ಸಂಗಮದಲ್ಲಿ ಕೈ ಹಿಡಿದು ಒಬ್ಬರೊಬ್ಬರು ಮತ್ತೊಂದು ದಡಕ್ಕೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಪಟ್ಟವರಲ್ಲಿ ವರ್ಷ (20), ಕೆಎಲ್ಇ ಕಾಲೇಜು ರಾಜಾಜಿನಗರ 2ನೇ ಹಂತ, ಅಭಿಷೇಕ್ (20) ಬಿಹಾರ ಮೂಲದವರಾಗಿದ್ದು ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ, ಹರ್ಪಿತ ಎನ್.ಎಲ್ (20) ಎಂಜಿನಿಯರಿಂಗ್ 2nd ಇಯರ್ ಚಿಕ್ಕಬಾಣವಾರ ಆರ್.ಆರ್ ಕಾಲೇಜು, ತೇಜಸ್ (21) ಹಾಗೂ ನೇಹ (19) ಕೆಮಿಸ್ಟ್ರಿ ಕೆಎಲ್ಇ ಕಾಲೇಜು ಆರ್.ಆರ್ ನಗರ ಎಂದು ಗುರುತಿಸಲಾಗಿದೆ.
ಇನ್ನು ಈ ವಿದ್ಯಾರ್ಥಿಗಳ ಮೃತದೇಹವನ್ನು ದಯಾನಂದ ವಿದ್ಯಾಸಾಗರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Ramanagara Five students from Bangalore drowned in Cauvery river at Mekedatu. It is gathered that the victims, identified as Harshita, Abhishek, Tejas, Varsha, and Sneha, were all engineering students from Bengaluru.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm