ಬ್ರೇಕಿಂಗ್ ನ್ಯೂಸ್
30-04-24 06:41 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ನೀನೊಬ್ಬ ವಿಕೃತ ಮನಸ್ಥಿತಿಯ ದ್ರೋಹಿ... ನಿನ್ನ ಅಧಿಕಾರ ಹಾಗೂ ಹಣದ ದುರಹಂಕಾರ ಬಹಳ ದಿನ ಉಳಿಯೋಲ್ಲ. ನಾನು ರಣಹೇಡಿಯಲ್ಲ. ಎದುರಿಸಿ ಹೋರಾಡುವ ಶಕ್ತಿ ನನಗಿದೆ. ತಾಯಿ ಬಗ್ಗೆಯೇ ಕಣ್ಣಿಟ್ಟಿರಬೇಕು ಎಂದು ಹೇಳಿದ ದ್ರೋಹಿ ನೀನು...ಎಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ತಪ್ಪಾಗಿದ್ದರೆ ಪ್ರಜ್ವಲ್ ನನ್ನು ನೇಣಿಗೆ ಹಾಕಿ, ನಾವು ತಡೆಯುವುದಿಲ್ಲ. ಪ್ರಕರಣದಲ್ಲಿ ಎಚ್.ಡಿ.ದೇವೇಗೌಡ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಪೆನ್ ಡ್ರೈವ್ ಪ್ರಕರಣ ಸಿಎಂ ಗಮನಕ್ಕೂ ಇದೆ, ಅದಕ್ಕಾಗಿಯೇ ಅವರು ದೇವೇಗೌಡರ ಕುಟುಂಬದವರೆಲ್ಲ ಸೋಲುತ್ತಾರೆಂದು ಭವಿಷ್ಯ ನುಡಿದಿದ್ದು ಎಂದರು
ಪೆನ್ ಡ್ರೈವ್ ಪ್ರಕರಣದಲ್ಲಿ ಮೋದಿಯವರನ್ನು ಎಳೆದು ತಂದಿದ್ದು ಯಾಕೆ? ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆ ಬಗ್ಗೆ ನಾನು ಪ್ರಸ್ತಾಪಿಸಲಾರೆ. ಆದರೆ ಆ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಂದಿನ ಕೇಂದ್ರ ಸಚಿವೆ ಸುಷ್ನಾ ಸ್ವರಾಜ್ ಮಾಡಿದ ಸಹಾಯ ಮರೆತುಬಿಟ್ಟಿರಾ? ಕನಿಷ್ಠ ಕೃತಜ್ಞತೆ ಇಲ್ಲದೆ ಹೇಳಿಕೆ ನೀಡಿದ್ದೀರಿ, ಅಂದು ಮೋದಿ ಸಹಾಯ ಮಾಡದಿದ್ದರೆ ಅಂದು ನಿಮ್ಮ ಕುಟುಂಬದ ಮಾನ ಮರ್ಯಾದೆ ಬೀದಿಗೆ ಬರುತ್ತಿತ್ತು ಎಂಬುದನ್ನು ಮರೆತಿರಾ? ಸಿಎಂ -ಕಾಂಗ್ರೆಸ್ ನವರ ಕಥೇ ಮುಂದೆ ಬಿಚ್ಚಿಡುತ್ತೇನೆ. ಜತೆಗೆ ಎಚ್ಚರಿಕೆಯನ್ನೂ ನೀಡುತ್ತೇನೆ ಎಂದು ಎಚ್ ಡಿಕೆ ಗುಡುಗಿದರು.
Kumaraswamy slams DK Shivakumar, says he's the reason behind Prajwal sex video leak. talks about him in singular says we are ready to put him to gallow if his sex videos are true he added.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:59 pm
Mangalore Correspondent
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm