ಬ್ರೇಕಿಂಗ್ ನ್ಯೂಸ್
01-05-24 03:00 pm HK News Desk ಕರ್ನಾಟಕ
ಹಾಸನ, ಮೇ 1: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕು ಪಡೆದುಕೊಳ್ಳುತ್ತಿದ್ದಂತೆ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಹೋಮ, ಹವನ ನಡೆದಿದೆ.
ರೇವಣ್ಣ ಪುತ್ರನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಕರಣದ ತನಿಖೆ ಎಸ್ಐಟಿಗೆ ವರ್ಗಾವಣೆಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೂಡ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಎಚ್ಡಿ ರೇವಣ್ಣ ಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
ಪೆನ್ಡ್ರೈವ್ ವಿಚಾರ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ. ಸದ್ಯ ತನಿಖೆಯ ಭಾಗವಾಗಿ ಎಸ್ಐಟಿ ಪ್ರಜ್ವಲ್ ರೇವಣ್ಣಾಗೆ ಬುಲಾವ್ ನೋಟೀಸ್ ನೀಡಿದೆ. ಹೀಗಾಗಿ ಮೇ ಮೂರರಂದು ಪ್ರಜ್ವಲ್ ವಾಪಾಸ್ಸಾಗಲಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಎಚ್ಡಿ ರೇವಣ್ಣ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ಹೀಗಾಗಿ ರೇವಣ್ಣ ಹೊಳೆನರಸೀಪುರದ ಮನೆಯಲ್ಲಿ ಹೋಮ, ಹವನ ನೆರವೇರಿಸಿದ್ದಾರೆ.
ಮನೆಯಲ್ಲಿ ಹೋಮ ಕುಂಡ ನಿರ್ಮಿಸಿ ಹೋಮ-ಹವನ ಮಾತ್ರವಲ್ಲದೆ, ಬೆಳಗ್ಗೆಯಿಂದಲೇ ವಿವಿಧ ಪೂಜೆಯನ್ನೂ ಮಾಡಿಸಿದ್ದಾರೆ. ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಎಚ್ಡಿ ರೇವಣ್ಣ ಹೊಳೆನರಸೀಪುರಕ್ಕೆ ಆಗಮಿಸಿದ್ದರು. ಇಂದು ಮುಂಜಾನೆ ಮಾವಿನ ಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವೇಶ್ವರ, ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ಮಾಡಿಸಿದರು.
Prajwal Revanna sex case, family offers prayers and Pooja to overcome problem at Hassan.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm