ಬ್ರೇಕಿಂಗ್ ನ್ಯೂಸ್
01-05-24 03:00 pm HK News Desk ಕರ್ನಾಟಕ
ಹಾಸನ, ಮೇ 1: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕು ಪಡೆದುಕೊಳ್ಳುತ್ತಿದ್ದಂತೆ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಹೋಮ, ಹವನ ನಡೆದಿದೆ.
ರೇವಣ್ಣ ಪುತ್ರನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಕರಣದ ತನಿಖೆ ಎಸ್ಐಟಿಗೆ ವರ್ಗಾವಣೆಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೂಡ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಎಚ್ಡಿ ರೇವಣ್ಣ ಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
ಪೆನ್ಡ್ರೈವ್ ವಿಚಾರ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ. ಸದ್ಯ ತನಿಖೆಯ ಭಾಗವಾಗಿ ಎಸ್ಐಟಿ ಪ್ರಜ್ವಲ್ ರೇವಣ್ಣಾಗೆ ಬುಲಾವ್ ನೋಟೀಸ್ ನೀಡಿದೆ. ಹೀಗಾಗಿ ಮೇ ಮೂರರಂದು ಪ್ರಜ್ವಲ್ ವಾಪಾಸ್ಸಾಗಲಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಎಚ್ಡಿ ರೇವಣ್ಣ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ಹೀಗಾಗಿ ರೇವಣ್ಣ ಹೊಳೆನರಸೀಪುರದ ಮನೆಯಲ್ಲಿ ಹೋಮ, ಹವನ ನೆರವೇರಿಸಿದ್ದಾರೆ.
ಮನೆಯಲ್ಲಿ ಹೋಮ ಕುಂಡ ನಿರ್ಮಿಸಿ ಹೋಮ-ಹವನ ಮಾತ್ರವಲ್ಲದೆ, ಬೆಳಗ್ಗೆಯಿಂದಲೇ ವಿವಿಧ ಪೂಜೆಯನ್ನೂ ಮಾಡಿಸಿದ್ದಾರೆ. ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಎಚ್ಡಿ ರೇವಣ್ಣ ಹೊಳೆನರಸೀಪುರಕ್ಕೆ ಆಗಮಿಸಿದ್ದರು. ಇಂದು ಮುಂಜಾನೆ ಮಾವಿನ ಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವೇಶ್ವರ, ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ಮಾಡಿಸಿದರು.
Prajwal Revanna sex case, family offers prayers and Pooja to overcome problem at Hassan.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm