ಬ್ರೇಕಿಂಗ್ ನ್ಯೂಸ್
01-05-24 05:34 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಕೂಲ್ ನಗರ ಎಂದೇ ಹೆಗ್ಗಳಿಕೆ ಗಳಿಸಿದ್ದ ರಾಜಧಾನಿ ಬೆಂಗಳೂರು ಇದೀಗ ಕಾದ ಪಾತ್ರೆಯಂತಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಗಾಳಿಗೆ ಜನರು ತತ್ತರಿಸಿದ್ದು, ನಗರದ ಕೆಂಗೇರಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿ ಹೊಸ ದಾಖಲೆ ಬರೆದಿದೆ.
ಕೇಂದ್ರ ಹವಾಮಾನ ಇಲಾಖೆ ಬೀದರ್, ಕಲಬುರಗಿ, ವಿಜಯವಾಡ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 5ರ ವರೆಗೆ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ಅತೀ ಹೆಚ್ಚು 41.8 ಡಿಗ್ರಿ ಉಷ್ಣಾಂಶ ದಾಖಲಾಗಿದ್ದರೆ, ಬೀದರಹಳ್ಳಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಲವು ದಿನಗಳ ಕಾಲ ಬೆಂಗಳೂರಿನಲ್ಲಿ 40 ಡಿಗ್ರಿಗಿಂತ ಹೆಚ್ಚು ಉಷ್ಣಾಂಶ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಸಾಧಾರಣವಾಗಿ ಕನಿಷ್ಠ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಎಚ್ಎಎಲ್ ವಿಮಾನ ನಿಲ್ದಾಣದ ಬಳಿ 37.5 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 40.1 ಡಿಗ್ರಿ, ಲಾಲ್ ಬಾಗ್ ನಲ್ಲಿ 40.5 ಡಿಗ್ರಿ, ಯಲಹಂಕದಲ್ಲಿ 40.8, ತಾವರೆಕೆರೆಯಲ್ಲಿ 40.3 ಡಿಗ್ರಿ, ಉತ್ತರಹಳ್ಳಿಯಲ್ಲಿ 39.9 ಡಿಗ್ರಿ ಉಷ್ಣಾಂಶ ದಾಖಲಾಗಿದೆ.
Bengaluru, the capital city, which was known as the cool city, is now like a waiting vessel. People are reeling from the rising heat day by day and the city's Kengeri recorded a new record temperature of 41.8 degrees Celsius.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm