ಬ್ರೇಕಿಂಗ್ ನ್ಯೂಸ್
01-05-24 06:29 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಲೈಂಗಿಕ ಕಿರುಕುಳದ ವಿಡಿಯೋ ಹೊರ ಬರುತ್ತಲೇ ವಿದೇಶಕ್ಕೆ ಹಾರಿದ್ದ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ನೋಟಿಸ್ ನೀಡಿದ ಬೆನ್ನಲ್ಲೇ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ತೆರಳಿದ್ದಾರೆಂದು ಹೇಳಲಾಗಿತ್ತು. ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದ್ದರು. ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ತನಿಖಾ ತಂಡದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಅವರು, ವಿಚಾರಣೆಗೆ ಹಾಜರಾಗಲು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ C.I.D ಬೆಂಗಳೂರು ಕಚೇರಿಗೆ ಕಾಲಾವಕಾಶ ಕೇಳಿ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ.
ವಿಶೇಷ ತನಿಖಾ ತಂಡಕ್ಕೆ ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಜೆ. ಪತ್ರ ಬರೆದಿದ್ದು, ಕಲಂ 41 (ಎ) ಸಿಆರ್ಪಿಸಿ ಅಡಿಯಲ್ಲಿ ನೀಡಿರುವ ನೋಟಿಸ್ಗೆ ಖುದ್ದಾಗಿ ಹಾಜರಾಗಲು ಏಳು ದಿನಗಳ ಸಮಯ ಕೇಳಿದ್ದಾರೆ. ನೋಟಿಸ್ ಬಗ್ಗೆ ವಿಷಯ ತಿಳಿಸಿದ್ದು, ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗಲು ಏಳು ದಿನದ
ಕಾಲಾವಕಾಶ ಅಗತ್ಯವಿದೆ. ನನ್ನ ಕಕ್ಷಿದಾರರಿಗೆ ಸುಮಾರು ಏಳು ದಿನಗಳ ಕಾಲಾವಕಾಶ ನೀಡಬೇಕು. ಅಲ್ಲದೆ, ವಿಚಾರಣೆಗೆ ಹಾಜರಾಗಲು ಮತ್ತೊಂದು ದಿನಾಂಕ ನೀಡಬೇಕು ಎಂದು ವಕೀಲರು ಪತ್ರದ ಮೂಲಕ ಎಸ್ಐಟಿಗೆ ಮನವಿ ಮಾಡಿದ್ದಾರೆ.
Prajwal Revanna sex video, Prajwal tweets says not in Bangalore, first reaction. Wednesday tweeted that he was not in Bengaluru to attend the enquiry after a Special Investigation Team (SIT) probing the sex abuse case involving the politician summoned him. Prajwal, the grandson of JD(S) patriarch and former Prime Minister HD Deve Gowda, was asked to appear before the SIT for investigation within 24 hours.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:59 pm
Mangalore Correspondent
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm