ಬ್ರೇಕಿಂಗ್ ನ್ಯೂಸ್
01-05-24 06:29 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಲೈಂಗಿಕ ಕಿರುಕುಳದ ವಿಡಿಯೋ ಹೊರ ಬರುತ್ತಲೇ ವಿದೇಶಕ್ಕೆ ಹಾರಿದ್ದ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ನೋಟಿಸ್ ನೀಡಿದ ಬೆನ್ನಲ್ಲೇ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ತೆರಳಿದ್ದಾರೆಂದು ಹೇಳಲಾಗಿತ್ತು. ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದ್ದರು. ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ತನಿಖಾ ತಂಡದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಅವರು, ವಿಚಾರಣೆಗೆ ಹಾಜರಾಗಲು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ C.I.D ಬೆಂಗಳೂರು ಕಚೇರಿಗೆ ಕಾಲಾವಕಾಶ ಕೇಳಿ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ.
ವಿಶೇಷ ತನಿಖಾ ತಂಡಕ್ಕೆ ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಜೆ. ಪತ್ರ ಬರೆದಿದ್ದು, ಕಲಂ 41 (ಎ) ಸಿಆರ್ಪಿಸಿ ಅಡಿಯಲ್ಲಿ ನೀಡಿರುವ ನೋಟಿಸ್ಗೆ ಖುದ್ದಾಗಿ ಹಾಜರಾಗಲು ಏಳು ದಿನಗಳ ಸಮಯ ಕೇಳಿದ್ದಾರೆ. ನೋಟಿಸ್ ಬಗ್ಗೆ ವಿಷಯ ತಿಳಿಸಿದ್ದು, ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗಲು ಏಳು ದಿನದ
ಕಾಲಾವಕಾಶ ಅಗತ್ಯವಿದೆ. ನನ್ನ ಕಕ್ಷಿದಾರರಿಗೆ ಸುಮಾರು ಏಳು ದಿನಗಳ ಕಾಲಾವಕಾಶ ನೀಡಬೇಕು. ಅಲ್ಲದೆ, ವಿಚಾರಣೆಗೆ ಹಾಜರಾಗಲು ಮತ್ತೊಂದು ದಿನಾಂಕ ನೀಡಬೇಕು ಎಂದು ವಕೀಲರು ಪತ್ರದ ಮೂಲಕ ಎಸ್ಐಟಿಗೆ ಮನವಿ ಮಾಡಿದ್ದಾರೆ.
Prajwal Revanna sex video, Prajwal tweets says not in Bangalore, first reaction. Wednesday tweeted that he was not in Bengaluru to attend the enquiry after a Special Investigation Team (SIT) probing the sex abuse case involving the politician summoned him. Prajwal, the grandson of JD(S) patriarch and former Prime Minister HD Deve Gowda, was asked to appear before the SIT for investigation within 24 hours.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm