ಬ್ರೇಕಿಂಗ್ ನ್ಯೂಸ್
02-05-24 01:30 pm HK News Desk ಕರ್ನಾಟಕ
ಕಲಬುರಗಿ, ಮೇ 2: ಪ್ರಜ್ವಲ್ ರೇವಣ್ಣ ಕುರಿತ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ. 41(a) ಸೆಕ್ಷನ್ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಇದರಂತೆ, 24 ಗಂಟೆಯ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇಲ್ಲದೇ ಇದ್ದಲ್ಲಿ ರೇವಣ್ಣ ಅವರನ್ನು ಬಂಧಿಸಬೇಕಾಗುತ್ತೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಹಾಜರಾಗದೆ ಇದ್ರೆ ರೇವಣ್ಣ ಅವರನ್ನ ಬಂಧಿಸಬೇಕಾಗುತ್ತೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೇರಳಿದ ಹಿನ್ನಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಈ ಪ್ರಕರಣದಲ್ಲಿ ಸಮಯ ಕೋಡೊದಕ್ಕೆ ಸಾಧ್ಯ ಇಲ್ಲ. ಹಾಗಾಗಿ ಅವರನ್ನು ಅರೆಸ್ಟ್ ಮಾಡಲು ಎಸ್ಐಟಿ ಕ್ರಮ ಕೈಗೊಳ್ಳುತ್ತದೆ ಎಂದರು.
ಕಲಬುರಗಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಗೃಹ ಸಚಿವರು, ಪ್ರಜ್ವಲ್ ರೇವಣ್ಣನ ಕೇಸ್ ರಾಷ್ಟ್ರ ಮಟ್ಟದಲ್ಲಿ ಚರ್ಚೆ ಆಗ್ತಿದೆ. ಇತರೆ ರಾಷ್ಟ್ರಗಳಿಗೂ ಈ ವಿಷಯ ತಲುಪಿದೆ. ನೂರಾರು ಜನ ಮಹಿಳೆಯರಿಗೆ ಅನ್ಯಾಯ ಆಗಿದೆ. ಹಿಂದೆ ನಮ್ಮ ಗಮನಕ್ಕೆ ಬಂದಿಲ್ವಾ ಅಂತಾ ನೀವು ಕೇಳಬಹುದು. ಆದ್ರೆ ದೂರು ಯಾರು ನೀಡಿರಲಿಲ್ಲ. ಮಹಿಳಾ ಆಯೋಗದ ಗಮನಕ್ಕೆ ಬಂದ ತಕ್ಷಣ ದೂರು ನೀಡಿದ್ದಾರೆ. ತಕ್ಷಣ ಎಸ್ ಐ ಟಿ ರಚನೆ ಮಾಡಿ ತನಿಖೆ ಮಾಡ್ತಿದ್ದೇವೆ. ದೂರು ದಾಖಲಾಗ್ತಿದ್ದ ಹಾಗೆ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ.
ಹೊರ ದೇಶಕ್ಕೆ ಹೋಗುವಾಗ ಅವರಿಗೆ ಕೇಂದ್ರ ಸರ್ಕಾರ ಡಿಪ್ಲೋಮೇಟಿಕ್ ಪಾಸ್ ಪೋರ್ಟ್ ಕೊಟ್ಟಿದೆ. ಡಿಪ್ಲೊಮೇಟಿಕ್ ಪಾಸ್ ಪೋರ್ಟ್ ಬಗ್ಗೆ ಹೆಚ್ಚಿನ ಪ್ರಶ್ನೆ ಮಾಡಲ್ಲ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ. ಇಬ್ಬರು ಮಹಿಳೆಯರು ದೂರು ದಾಖಲು ಮಾಡಿದ್ದಾರೆ. ಸಾವಿರಾರು ಜನ ಮಹಿಳೆಯರು ಈ ವಿಡಿಯೋದಲ್ಲಿ ಇದ್ದಾರೆ. ಹಾಗಾಗಿ ಈ ಕೇಸ್ ಹೇಗ ಬೇಕಾದ್ರು ಮಾಡೋದಕ್ಕೆ ಆಗೋದಿಲ್ಲ. ಮಹಿಳೆಯರ ಕುಟುಂಬದ ಬಗ್ಗೆಯೂ ನಾವು ಆಲೋಚನೆ ಮಾಡಬೇಕಾಗುತ್ತೆ ಎಂದರು.
A lookout notice was issued against incumbent JD(S) MP Prajwal Revanna by the Special Investigation Team (SIT) probing the Hassan sex scandal, sources said on Thursday.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm