ಬ್ರೇಕಿಂಗ್ ನ್ಯೂಸ್
05-05-24 10:54 pm HK News Desk ಕರ್ನಾಟಕ
ಬೆಂಗಳೂರು, ಮೇ 05: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿ, ಅಕ್ರಮ ಬಂಧನದಲ್ಲಿ ಇರಿಸಿದ ಆರೋಪದ ಮೇಲೆ ಶಾಸಕ ರೇವಣ್ಣ ಅವರನ್ನ ಬಂಧಿಸಿರುವುದು ಸರಿಯಾದ ಕ್ರಮ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.
ಅಲ್ಲದೇ, ಪ್ರಜ್ವಲ್ ರೇವಣ್ಣ ಈಗಲೂ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್ಡಿಎ ಸಂಸದರಾದರೆ ಅವರ ವಿರುದ್ಧ ಪಕ್ಷದ ವತಿಯಿಂದಲೇ ಕಾನೂನು ಕ್ರಮ ಜರುಗಿಸುವ ಸಾಧ್ಯತೆಗಳ ಬಗ್ಗೆ ವರಿಷ್ಠರ ಜತೆ ಚರ್ಚಿಸುವುದಾಗಿ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಜ್ವಲ್ ರೇವಣ್ಣ ನಡೆಸಿದ ಮಹಿಳಾ ದೌರ್ಜನ್ಯದ ಘಟನೆಗಳು ಯಾವಾಗ ನಡೆದಿವೆ ಎಂಬ ಬಗ್ಗೆ ತನಿಖಾ ತಂಡ ವರದಿ ನೀಡಬೇಕಿದೆ. ನಮ್ಮ ಹೊಂದಾಣಿಕೆಯಲ್ಲಿ ಇನ್ನೂ ಪ್ರಜ್ವಲ್ ರೇವಣ್ಣ ಗೆದ್ದಿಲ್ಲ. ಈಗ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಜೆಡಿಎಸ್ ಪಕ್ಷ ಈಗಾಗಲೇ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಜೆಡಿಎಸ್ ಜತೆಗೆ ಇದೇ ಮೊದಲ ಬಾರಿ ಚುನಾವಣಾ ಮೈತ್ರಿ ಏರ್ಪಟ್ಟಿದೆ. ಜೆಡಿಎಸ್ ತನ್ನ ಕೋಟಾದಲ್ಲಿ ಪ್ರಜ್ವಲ್ಗೆ ಟಿಕೆಟ್ ಕೊಟ್ಟಿದೆ. ಅವರ ಮೇಲೆ ಆರೋಪ ಕೇಳಿ ಬಂದ ಬಳಿಕ ಅವರನ್ನು ಜೆಡಿಎಸ್ ಅಮಾನತು ಮಾಡಿದೆ ಎಂದರು.
ಈಗ ಪ್ರಜ್ವಲ್ ಅವರನ್ನು ಅತ್ಯಾಚಾರಿ ಎಂದು ಕರೆಯುವ ಸಿದ್ದರಾಮಯ್ಯ 2019 ರ ಏಪ್ರಿಲ್ನಲ್ಲಿ ಕಡೂರಿನ ಎಪಿಎಂಸಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಹಾಡಿ ಹೊಗಳಿದ್ದರು. ‘ಪ್ರಜ್ವಲ್ ಯುವ ನಾಯಕ, ಓಡಾಡಿ ಕೆಲಸ ಮಾಡ್ತಾರೆ. ಆದ್ದರಿಂದ ಅವರಿಗೇ ಮತ ನೀಡಿ ಗೆಲ್ಲಿಸಿಕೊಡಿ ಎಂದು ಟ್ವೀಟ್ ಮಾಡಿದ್ದರು. ಈ ಮೂಲಕ ಪ್ರಜ್ವಲ್ ಪರ ಕೆಲಸ ಮಾಡಿ ಸಿದ್ದರಾಮಯ್ಯ ಮತವನ್ನು ಯಾಚಿಸಿದ್ದರು ಎಂದು ಅಶೋಕ ಹೇಳಿದರು.
ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣ ಅವರ ಪ್ರಕರಣವನ್ನು ಬಿಜೆಪಿ ಒಪ್ಪಿಕೊಳ್ಳುವುದಿಲ್ಲ. ಆದರೆ, ಪ್ರಕರಣದ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಅವರು ತಿಳಿಸಿದರು.
ಬಿಜೆಪಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಷಯವಾಗಿ ಎಚ್.ಡಿ.ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.
BJP R Ashok says Revanna arrest has been a right move by congress government. In case if Prajwal wins this coming lok sabha elections the party also will take right action against him he added.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm