ಬ್ರೇಕಿಂಗ್ ನ್ಯೂಸ್
05-05-24 10:54 pm HK News Desk ಕರ್ನಾಟಕ
ಬೆಂಗಳೂರು, ಮೇ 05: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿ, ಅಕ್ರಮ ಬಂಧನದಲ್ಲಿ ಇರಿಸಿದ ಆರೋಪದ ಮೇಲೆ ಶಾಸಕ ರೇವಣ್ಣ ಅವರನ್ನ ಬಂಧಿಸಿರುವುದು ಸರಿಯಾದ ಕ್ರಮ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.
ಅಲ್ಲದೇ, ಪ್ರಜ್ವಲ್ ರೇವಣ್ಣ ಈಗಲೂ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್ಡಿಎ ಸಂಸದರಾದರೆ ಅವರ ವಿರುದ್ಧ ಪಕ್ಷದ ವತಿಯಿಂದಲೇ ಕಾನೂನು ಕ್ರಮ ಜರುಗಿಸುವ ಸಾಧ್ಯತೆಗಳ ಬಗ್ಗೆ ವರಿಷ್ಠರ ಜತೆ ಚರ್ಚಿಸುವುದಾಗಿ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಜ್ವಲ್ ರೇವಣ್ಣ ನಡೆಸಿದ ಮಹಿಳಾ ದೌರ್ಜನ್ಯದ ಘಟನೆಗಳು ಯಾವಾಗ ನಡೆದಿವೆ ಎಂಬ ಬಗ್ಗೆ ತನಿಖಾ ತಂಡ ವರದಿ ನೀಡಬೇಕಿದೆ. ನಮ್ಮ ಹೊಂದಾಣಿಕೆಯಲ್ಲಿ ಇನ್ನೂ ಪ್ರಜ್ವಲ್ ರೇವಣ್ಣ ಗೆದ್ದಿಲ್ಲ. ಈಗ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಜೆಡಿಎಸ್ ಪಕ್ಷ ಈಗಾಗಲೇ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಜೆಡಿಎಸ್ ಜತೆಗೆ ಇದೇ ಮೊದಲ ಬಾರಿ ಚುನಾವಣಾ ಮೈತ್ರಿ ಏರ್ಪಟ್ಟಿದೆ. ಜೆಡಿಎಸ್ ತನ್ನ ಕೋಟಾದಲ್ಲಿ ಪ್ರಜ್ವಲ್ಗೆ ಟಿಕೆಟ್ ಕೊಟ್ಟಿದೆ. ಅವರ ಮೇಲೆ ಆರೋಪ ಕೇಳಿ ಬಂದ ಬಳಿಕ ಅವರನ್ನು ಜೆಡಿಎಸ್ ಅಮಾನತು ಮಾಡಿದೆ ಎಂದರು.
ಈಗ ಪ್ರಜ್ವಲ್ ಅವರನ್ನು ಅತ್ಯಾಚಾರಿ ಎಂದು ಕರೆಯುವ ಸಿದ್ದರಾಮಯ್ಯ 2019 ರ ಏಪ್ರಿಲ್ನಲ್ಲಿ ಕಡೂರಿನ ಎಪಿಎಂಸಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಹಾಡಿ ಹೊಗಳಿದ್ದರು. ‘ಪ್ರಜ್ವಲ್ ಯುವ ನಾಯಕ, ಓಡಾಡಿ ಕೆಲಸ ಮಾಡ್ತಾರೆ. ಆದ್ದರಿಂದ ಅವರಿಗೇ ಮತ ನೀಡಿ ಗೆಲ್ಲಿಸಿಕೊಡಿ ಎಂದು ಟ್ವೀಟ್ ಮಾಡಿದ್ದರು. ಈ ಮೂಲಕ ಪ್ರಜ್ವಲ್ ಪರ ಕೆಲಸ ಮಾಡಿ ಸಿದ್ದರಾಮಯ್ಯ ಮತವನ್ನು ಯಾಚಿಸಿದ್ದರು ಎಂದು ಅಶೋಕ ಹೇಳಿದರು.
ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣ ಅವರ ಪ್ರಕರಣವನ್ನು ಬಿಜೆಪಿ ಒಪ್ಪಿಕೊಳ್ಳುವುದಿಲ್ಲ. ಆದರೆ, ಪ್ರಕರಣದ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಅವರು ತಿಳಿಸಿದರು.
ಬಿಜೆಪಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಷಯವಾಗಿ ಎಚ್.ಡಿ.ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.
BJP R Ashok says Revanna arrest has been a right move by congress government. In case if Prajwal wins this coming lok sabha elections the party also will take right action against him he added.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm