ಬ್ರೇಕಿಂಗ್ ನ್ಯೂಸ್
10-05-24 02:32 pm HK News Desk ಕರ್ನಾಟಕ
ಗಂಗಾವತಿ, ಮೇ.10: ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ. ಸರ್ವೋಚ್ಛ ನ್ಯಾಯಲಯದ ಆದೇಶದಂತೆ ಹಿಂದೂಗಳ ಟ್ರಸ್ಟ್ ಕಡೆಯಿಂದ ನಿರ್ಮಿಸಿರುವುದು. ಅಯೋಧ್ಯೆ ರಾಮ ಮಂದಿರ ಕೆಡವುತ್ತೇನೆ ಎನ್ನುವುದು ಸರ್ವೋಚ್ಚ ನ್ಯಾಯಲಯದ ಆದೇಶವನ್ನು ಉಲ್ಲಂಘಿಸಿದಂತೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಗಂಗಾವತಿಯ ಜಯನಗರದಲ್ಲಿ ಸತ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು. ಅಯೋಧ್ಯೆ ರಾಮ ಮಂದಿರ ಕೆಡವುತ್ತೇನೆ ಎನ್ನುವುದು ಸರ್ವೋಚ್ಚ ನ್ಯಾಯಲಯದ ಆದೇಶ ಉಲ್ಲಂಘಿಸಿದಂತೆ. ಅದನ್ನು ಯಾರೇ ಹೇಳಲಿ, ಅದು ಸುಪ್ರೀಂ ಕೋರ್ಟ್ ಉಲ್ಲಂಘನೆ ಎಂದರು.
ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿ ನಡೆಸುತ್ತಿರುವ ಹಿಂದು ದೇವಾಲಯಗಳನ್ನು ಆಯಾ ಪ್ರದೇಶಗಳಲ್ಲಿ ಇರುವ ಹಿಂದೂಗಳಿಗೆ ನಿರ್ವಹಣೆ ಹಾಗೂ ಆಡಳಿತದ ಹೊಣೆ ನೀಡಬೇಕು ಎಂದವರು ಆಗ್ರಹಿಸಿದರು. ದೇಶದಲ್ಲಿರುವ ಬಹುತೇಕ ಪ್ರಾರ್ಥನಾ ಮಂದಿರಗಳನ್ನು ಆಯಾ ಸಮುದಾಯಗಳಿಗೆ ಆಡಳಿತದ ಹೊಣೆ ನೀಡಲಾಗಿದೆ. ಆದರೆ, ಹಿಂದೂಗಳ ದೇವಾಲಯಗಳ ಆಡಳಿತವನ್ನು ಮಾತ್ರ ಧಾರ್ಮಿಕ ದತ್ತಿ ಇಲಾಖೆ ಮೂಲಕ ಸರಕಾರ ನಿಯಂತ್ರಣ ಮಾಡುತ್ತಿದೆ. ಇದು ಸರಿಯಾದ ನಿಯಮವಲ್ಲ. ಆಯಾ ಧರ್ಮದ ವ್ಯಾಪ್ತಿಗೆ ಒಳಪಡುವ ದೇವಾಲಯಗಳನ್ನು ಅವರದೇ ಆಡಳಿತಕ್ಕೆ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸರಕಾರ ಎಲ್ಲಿಯೂ ಈ ಆದೇಶವನ್ನು ಜಾರಿಗೆ ತರುತ್ತಿಲ್ಲ. ಇದು ತಕ್ಷಣದಿಂದ ಜಾರಿಗೆ ಬರಬೇಕು. ಅಷ್ಟೇ ಅಲ್ಲದೆ, ಹಿಂದೂಗಳ ಸಂಖ್ಯೆ ಕುಸಿಯುತ್ತಿದ್ದು ಇದರ ಬಗ್ಗೆ ಯೋಚನೆ ಮಾಡಬೇಕಾಗಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯಿದೆ ಜಾರಿಯಾದರೆ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದಷ್ಟು ಬೇಗನೆ ಈ ಮಸೂದೆ ಮಂಡನೆಯಾಗಿ ಜಾರಿಗೆ ಬರಬೇಕು ಎಂದರು.
ಶತಮಾನಗಳಿಂದ ಕಂಡಿದ್ದ ಮಂದಿರ ನಿರ್ಮಾಣದ ಕನಸು ಸದ್ಯ ನನಸಾಗಿದೆ. ಇಲ್ಲಿಗೆ ನಮ್ಮ ಕೆಲಸ ಮುಗಿಯಿತು ಎಂದು ಸುಮ್ಮನೆ ಕುಳಿತುಕೊಳ್ಳುವಂತಿಲ್ಲ. ಮಂದಿರ ನಿರ್ಮಾಣ ಮಾಡಿದ್ದು, ದೊಡ್ಡ ಕಾರ್ಯವಲ್ಲ. ಅದನ್ನು ಸೂರ್ಯ ಚಂದ್ರರು ಇರುವವರೆಗೂ ಉಳಿಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಮಂದಿರದ ಮೇಲೆ ಯಾವುದೇ ರೀತಿ ದಾಳಿಯಾಗದಂತೆ, ಮಂದಿರಕ್ಕೆ ಧಕ್ಕೆಯಾಗದಂತೆ ಸಂರಕ್ಷಣೆ ಮಾಡಿಕೊಂಡು ಹೋಗುವುದು ಪ್ರತಿಯೊಬ್ಬ ಭಾರತೀಯ, ಅದರಲ್ಲೂ ಪ್ರತಿಯೊಬ್ಬ ಹಿಂದೂವಿನ ಕೆಲಸವಾಗಿದೆ. ಹಿಂದುಗಳು ಹಿಂದುಗಳಾಗಿಯೇ ಉಳಿದರಷ್ಟೇ ಈ ಮಂದಿರ ಉಳಿಯುತ್ತದೆ ಎಂದು ಸ್ವಾಮೀಜಿ ಹೇಳಿದರು.
It was not the central government that built the Ram temple in Ayodhya. Constructed by the Hindu Trust as per the order of the Supreme Court. Vishwaprasanna Theertha Swamiji of Pejawar Mutt, Udupi, said that the demolition of ram temple in Ayodhya is a violation of the Supreme Court's order.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm