ಬ್ರೇಕಿಂಗ್ ನ್ಯೂಸ್
11-05-24 06:57 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಮೇ.11: ಪೊಲೀಸ್ ಪೇದೆಗಳಿಬ್ಬರು ತಮ್ಮ ಬಗ್ಗೆ ಎಸ್ಪಿ ತಾರತಮ್ಯ ಮಾಡುತ್ತಿದ್ದಾರೆ, ಜಾತಿ ಕಾರಣಕ್ಕೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಎಸ್ಪಿ ಕಚೇರಿ ಮುಂದೆ ತಮ್ಮ ಕುಟುಂಬದೊಂದಿಗೆ ಧರಣಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ಆಶೋಕ್ ಹಾಗೂ ಚೇಳೂರು ಪೊಲೀಸ್ ಠಾಣೆ ಪೇದೆ ನರಸಿಂಹಮೂರ್ತಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.

2023ರ ಆಗಸ್ಟ್ ನಲ್ಲಿ ಮನಿ ಡಬ್ಲಿಂಗ್ ಪ್ರಕರಣ ಒಂದರಲ್ಲಿ ಪೇದೆಗಳಾದ ಆಶೋಕ್ ಹಾಗೂ ನರಸಿಂಹಮೂರ್ತಿ ವಿರುದ್ದ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಆರೋಪಿಗಳ ಜೊತೆಗೆ ಶಾಮೀಲಾಗಿರುವ ಆರೋಪ ಇದ್ದುದರಿಂದ, ಇಬ್ಬರನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆ ನಡೆಸಲಾಗುತ್ತಿತ್ತು. ಅಮಾನತು ಆದೇಶ ರದ್ದು ಮಾಡಿ ಮಂಚೇನಹಳ್ಳಿ ಹಾಗೂ ಚೇಳೂರು ಠಾಣೆಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು.
ಇಲಾಖಾ ವಿಚಾರಣೆಗೆ ಹಾಜರಾಗದೇ ಕಾಲಹರಣ ಮಾಡಿದ್ದ ಪೇದೆಗಳು ಮತ್ತೆ ಕಾಲಾವಾಕಾಶ ಕೋರಿದ್ದರು. ಈ ವಿಚಾರದಲ್ಲಿ ವಿಚಾರಣೆ ನಡೆಸುತ್ತಿರುವ ಅಧಿಕಾರಿ, ಸಮಪರ್ಕವಾಗಿ ಸ್ಪಂದಿಸಿಲ್ಲ. ಎಸ್ಪಿ ಡಿ.ಎಲ್ ನಾಗೇಶ್ ಪ್ರಕರಣದಲ್ಲಿ ನಮ್ಮ ವಾದ ಕೇಳದೇ ನೇರವಾಗಿ ಅಮಾನತು ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಕೆಳ ಜಾತಿ ಎಂದು ಜಾತಿ ತಾರತಮ್ಮ ಮಾಡಿದ್ದಾಗಿ ಆರೋಪಿಸಿದ್ದಾರೆ.
ಎಸ್ಪಿ ಕಚೇರಿ ಎದುರು ಹೆಂಡತಿ ಮಕ್ಕಳ ಸಮೇತ ಆಗಮಿಸಿ ಅಂಬೇಡ್ಕರ್ ಪೋಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಎಸ್ಪಿ ಖಾಸೀಂ ಸಾಬ್ ಪ್ರತಿಭಟನಾ ನಿರತ ಪೇದೆಗಳ ಮನವೊಲಿಸಿ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
Chikkaballapur two police constable protest with family sitting at SP office, demanding justice. Constables alleged that SP D L Nagesh is not cooperating neither listening to their probelms they added.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm