ಬ್ರೇಕಿಂಗ್ ನ್ಯೂಸ್
11-05-24 07:25 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.11: ಕರ್ನಾಟಕ ಹೈಕೋರ್ಟ್ ನಲ್ಲಿ ವಕೀಲರಾಗಿದ್ದ ಚೈತ್ರಾ ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಜಯನಗರ ಬಳಿಯಿರುವ ಅಣ್ಣಯ್ಯ ಲೇಔಟ್ ನಲ್ಲಿ ನಡೆದಿದೆ.
ಚೈತ್ರಾ ಅವರ ಪತಿ ಕೆಎಎಸ್ ಅಧಿಕಾರಿಯಾಗಿದ್ದು, ಯಾರೂ ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಅವರ ಶವ ಮನೆಯ ಫ್ಯಾನೊಂದಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಶವದ ಬಳಿ ಡೆತ್ ನೋಟ್ ಸಿಕ್ಕಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ನಡೆದಾಗ ಶಿವಕುಮಾರ್ ಅವರು ಹೊರಗಡೆ ಹೋಗಿದ್ದರು. ಅವರು ಪುನಃ ಮನೆಗೆ ಹಿಂದಿರುಗಿದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿರುವ ಶಿವಕುಮಾರ್ ಅವರು, 2016ರಲ್ಲಿ ಚೈತ್ರಾ ಅವರನ್ನು ವಿವಾಹವಾಗಿದ್ದರು. ಅವರಿಗೆ ಐದು ವರ್ಷದ ಮಗಳು ಇದ್ದಾಳೆ.
ಆತ್ಮಹತ್ಯೆಯ ವಿಷಯ ತಿಳಿಯುತ್ತಿದ್ದಂತೆ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಸಂಜಯ್ ನಗರ ಪೊಲೀಸರು, ಮೃತದೇಹವನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಚೈತ್ರಾ ಅವರ ಮೃತದೇಹದ ಪಕ್ಕ ಸಿಕ್ಕಿರುವ ಡೆತ್ ನೋಟ್ ನಲ್ಲಿ ನನಗೆ ಜೀವನ ಸಾಕಾಗಿದೆ. I am just leaving ಎಂದು ಬರೆಯಲಾಗಿದೆ. ಅದರಲ್ಲಿ ಪತಿಯ ವಿರುದ್ಧವಾಗಲೀ ಅಥವಾ ಮತ್ಯಾರದ್ದೇ ವಿರುದ್ಧವಾಗಲೀ ದೂರಿಲ್ಲ. ಆದರೂ, ಪೊಲೀಸರು ಮನೆಯ ಸದಸ್ಯರನ್ನು ವಿಚಾರಣೆ ನಡೆಸಿದ್ದಾರೆ
ಡೆತ್ ನೋಟ್ ನಲ್ಲಿ ಅವರು, "ನಾನು ಕಳೆದ ಕೆಲವು ತಿಂಗಳುಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ಆದರೆ, ಅದರಿಂದ ಆಚೆ ಬರಲು ನಾನು ಪ್ರಯತ್ನ ನಡೆಸಿದ್ದು, ಅದು ಸಾಧ್ಯವಾಗಲಿಲ್ಲ. ಹಾಗಾಗಿ, ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ಲೈಫ್ ಎಂಜಾಯ್ ಮಾಡಿ ಹೇಳಿದ್ದಾರೆಂದು ಚೈತ್ರಾ ಬರೆದಿದ್ದಾರೆ'' ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Lawyer, wife of KAS officer shivakumar Chaitra commits suicide in Bangalore. The deceased, identified as Chaitra, was the wife of KAS officer Shivakumar, who serves as a Sub Divisional Officer in the Karnataka Industrial Development Board (KIDB). A death note has been found and police are now investigating the case.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm