ಬ್ರೇಕಿಂಗ್ ನ್ಯೂಸ್
11-05-24 09:46 pm HK News Desk ಕರ್ನಾಟಕ
ಶಿವಮೊಗ್ಗ, ಮೇ.11: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಪಿ ದಿನೇಶ್ ಪಕ್ಷೇತರ ಸ್ಪರ್ಧಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಟಿಕೆಟನ್ನು ಬಿಜೆಪಿ ಬಿಟ್ಟು ಬಂದಿರುವ ಆಯನೂರು ಮಂಜುನಾಥ್ ಪಡೆಯುವುದು ಖಾತ್ರಿಯಾಗಿದ್ದು ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಸ್.ಪಿ. ದಿನೇಶ್, ಬಂಡಾಯ ಸಾರಿದ್ದಾರೆ.
ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ. 2006 ರಿಂದ ನಾನು ತಯಾರಿ ಮಾಡಿಕೊಂಡು ಬಂದಿದ್ದೇನೆ. ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದೆ. ಈ ಬಾರಿ ಸ್ಪರ್ಧೆಗಾಗಿ ಈಗಾಗಲೇ ಎಲ್ಲ ತಯಾರಿ ಮಾಡಿಕೊಂಡಿದ್ದೇನೆ.
ಡಿ.ಕೆ ಶಿವಕುಮಾರ್ ಈ ಬಾರಿಯೂ ಟಿಕೆಟ್ ಕೊಡುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಡಿಕೆಶಿ ಭರವಸೆ ಮಾತಿನಂತೆ ಎಲ್ಲಾ ಕಡೆ ಪ್ರವಾಸ ಮಾಡಿದ್ದೇನೆ. ಆದರೆ ಈಗ ಕಾಂಗ್ರೆಸ್ ಪಕ್ಷ ಬೇರೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈಗಾಗಲೇ ನಾನು ಒಂದು ಹೆಜ್ಜೆ ಮುಂದಿಟ್ಟಿದ್ದೇನೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರಿಗೆ ಮನವಿ ಮಾಡುತ್ತೇನೆ. ಪಕ್ಷ ನಿಷ್ಠೆ ಇರುವ ವ್ಯಕ್ತಿಗೆ ಟಿಕೆಟ್ ನೀಡಬೇಕು. ಪಕ್ಷದಿಂದ ಪಕ್ಷಕ್ಕೆ ಹಾರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು ಸರಿಯಲ್ಲ. ಪಕ್ಷ ನಿಷ್ಠೆಯ ವ್ಯಕ್ತಿಗೆ ಟಿಕೆಟ್ ನೀಡಿದರೆ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ. ಮೇ 15ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಎಸ್.ಪಿ. ದಿನೇಶ್ ಹೇಳಿದರು.
ಅಭ್ಯರ್ಥಿ ಬದಲಾವಣೆ ಮಾಡಲು ಇನ್ನೂ ಅವಕಾಶ ಇದೆ. ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ ಅವರು, ಅತಿಥಿ ಉಪನ್ಯಾಸಕರ ಬೆಂಬಲ ನನಗಿದೆ. ಯಾವುದೇ ಪಕ್ಷದ ಮುಖಂಡರೂ ನನಗೆ ಸಂಪರ್ಕಿಸಿಲ್ಲ ಎಂದಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ರಘುಪತಿ ಭಟ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಕಾಂಗ್ರೆಸ್ ಒಳಗಿನ ಬಂಡಾಯ ಬಿಜೆಪಿಗೆ ಪ್ಲಸ್ ಆಗಲಿದೆ. ಕಳೆದ ಬಾರಿ ಈ ಕ್ಷೇತ್ರವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
SP Dinesh, who was seeking a Congress ticket from south-west graduate constituency, is contesting as an independent candidate. Ayanur Manjunath, who has quit the BJP, is likely to get the Congress ticket. Dinesh has rebelled.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm