ಬ್ರೇಕಿಂಗ್ ನ್ಯೂಸ್
11-05-24 11:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11: ಕರ್ನಾಟಕದ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆಯಲಿರುವ ಆರು ಸ್ಥಾನಗಳ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಐದು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು ಜೆಡಿಎಸ್ಸಿಗೆ ಹಾಲಿ ಭೋಜೇಗೌಡ ಸದಸ್ಯರಿರುವ ನೈರುತ್ಯ ಶಿಕ್ಷಕರ ಕ್ಷೇತ್ರವನ್ನು ಒಂದನ್ನು ಮಾತ್ರ ಬಿಟ್ಟುಕೊಟ್ಟಂತಿದೆ.
ಮಾಜಿ ಸಿಎಂ ಯಡಿಯೂರಪ್ಪ 4-2 ಸ್ಥಾನಗಳಿಗೆ ಮೈತ್ರಿ ಎಂದು ಹೇಳುತ್ತ ಬಂದಿದ್ದರೂ ಬಿಜೆಪಿ ರಾಷ್ಟ್ರೀಯ ನಾಯಕರು ಐದು ಸ್ಥಾನಗಳಿಗೆ ಅಭ್ಯರ್ಥಿ ಪ್ರಕಟಿಸಿರುವುದು ರಾಜ್ಯ ಬಿಜೆಪಿಗೆ ಶಾಕ್ ನೀಡಿದಂತಿದೆ. ಮೈತ್ರಿ ಬಗ್ಗೆ ಅಪಸ್ವರ ಎದ್ದಿರುವಾಗಲೇ ಈ ರೀತಿಯ ಶಾಕ್ ನೀಡಿರುವುದು ಚರ್ಚೆಗೆ ಕಾರಣವಾಗಿದೆ.
ಕಲಬುರಗಿ ಕೇಂದ್ರಿತ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ್ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಲಿ ಸದಸ್ಯ ಎ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಹಾಲಿ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮುಖಂಡ ಇ.ಸಿ.ನಿಂಗರಾಜು ಗೌಡ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಚನ್ನಗಿರಿ ಹಾಗೂ ಶಿವಮೊಗ್ಗದ ವೈದ್ಯ ಡಾ.ಧನಂಜಯ ಸರ್ಜಿ ಅವರ ಹೆಸರನ್ನು ಪ್ರಕಟಿಸಲಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಹೆಸರನ್ನು ಪ್ರಕಟಿಸದೇ ಇರುವುದರಿಂದ ಆ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡಲಾಗಿದೆಯೇ ಎನ್ನುವುದು ಇನ್ನೂ ದೃಢವಾಗಿಲ್ಲ.
ಪರಿಷತ್ ಚುನಾವಣೆಯಲ್ಲಿ ಮೈಸೂರು ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಕುರಿತು ರಾಜ್ಯ ನಾಯಕರ ಹಂತದಲ್ಲಿ ಚರ್ಚೆಗಳಾಗಿದ್ದವು. ಮೈಸೂರಿನಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಸದಸ್ಯರಾಗಿರುವ ಜೆಡಿಎಸ್ ನ ಎಸ್.ಎಲ್.ಬೋಜೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ದಿಢೀರ್ ಆಗಿ ಐದು ಸ್ಥಾನಗಳಿಗೆ ಅಭ್ಯರ್ಥಿ ಘೋಷಿಸಿದ್ದು ಮೈತ್ರಿಗೆ ಎಳ್ಳುನೀರು ಬಿತ್ತಾ ಎನ್ನುವ ಚರ್ಚೆಗೆ ಕಾರಣವಾಗಿಸಿದೆ. ಪ್ರಜ್ವಲ್ ರೇವಣ್ಣ ವಿಡಿಯೋ ಕೇಸಿನ ಬಳಿಕ ಮೈತ್ರಿಯನ್ನು ಕಡಿದುಕೊಳ್ಳಬೇಕು ಎಂಬ ಬಗ್ಗೆ ಬಿಜೆಪಿ ಒಳಗಿನ ನಾಯಕರು ಪ್ರತಿಪಾದನೆ ಮಾಡುತ್ತ ಬಂದಿದ್ದಾರೆ.
The BJP high command has announced its candidates for five seats for the six seats to the Legislative Council from the teachers' and graduates' constituencies in Karnataka, leaving only one seat for the JD(S), which has the sitting Bhojegowda members.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm