ಬ್ರೇಕಿಂಗ್ ನ್ಯೂಸ್
12-05-24 10:51 am HK News Desk ಕರ್ನಾಟಕ
ಹಾಸನ, ಮೇ 12: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತರಾಗಿದ್ದ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದೇವರಾಜೇಗೌಡ ಅವರನ್ನು ಶುಕ್ರವಾರ ಚಿತ್ರದುರ್ಗದ ಹಿರಿಯೂರು ಬಳಿ ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಹೊಳೆನರಸೀಪುರ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ಈ ವೇಳೆ ಲೈಂಗಿಕ ದೌರ್ಜನ್ಯದ ಕೇಸ್ನಲ್ಲಿ ಪೊಲೀಸರು ಬಂಧಿಸಿ, ಹೊಳೆನರಸೀಪುರ ಪಟ್ಟಣದ ಅರಕಲಗೂಡು ರಸ್ತೆಯಲ್ಲಿರೋ ನ್ಯಾಯಾಧೀಶರ ಮನೆಯಲ್ಲಿ ನ್ಯಾಯಾಧೀಶರೆದುರು ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ದೇವರಾಜೇಗೌಡರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯದ ಕೇಸ್ ಮೇಲೆ ದೇವರಾಜೇಗೌಡನನ್ನ ಪೊಲೀಸರು ಬಂಧಿಸಿದ್ದರು. ಈ ಕೇಸ್ನಲ್ಲಿ ಇದೀಗ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಶನಿವಾರ ಬೆಳಿಗ್ಗೆಯಿಂದ ದೇವರಾಜೇಗೌಡರನ್ನ ವಿಚಾರಣೆ ನಡೆಸಿದ ಪೊಲೀಸರು, ಸಂಜೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ಬಳಿಕ ಪ್ರಿನ್ಸಿಪಲ್ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಸಿದ್ರಾಮ್ ಅವರ ಮನೆಯಲ್ಲಿ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.
ಇನ್ನು ನ್ಯಾಯಾಧೀಶರ ಆದೇಶ ಹೊರಬೀಳುತ್ತಿದ್ದಂತೆ ಹಾಸನ ಜಿಲ್ಲಾ ಕಾರಾಗೃಹಕ್ಕೆ ವಕೀಲ ದೇವರಾಜೇಗೌಡನನ್ನ ಹೊಳೆನರಸೀಪುರ ಠಾಣೆ ಪೊಲೀಸರು ಸ್ಥಳಾಂತರಿಸಿದರು. ಈ ವೇಳೆ ಮಾತನಾಡಿದ ಗೌಡ, ಇನ್ನು ಎಂಟು ದಿನದಲ್ಲಿ ಹೊರಗೆ ಬರ್ತೇನೆ. ಸತ್ಯಕ್ಕೆ ಎಂದೂ ಜಯ ಇದೆ ಅಂತ ಹೇಳುತ್ತಲೇ, ಜೈಲಿಗೆ ಹೊರಟ್ರು.
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಕೀಲನ ವಿರುದ್ಧ ಪ್ರಕರಣ ದಾಖಲಾಗಿತ್ತು. ಏಪ್ರಿಲ್ 1ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ ದೂರು ನೀಡಿದ್ದು, ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿತ್ತು.
BJP leader and advocate G Devaraje Gowda was arrested in connection with a sex abuse video allegedly belonging to Hassan JD(S) MP Prajwal Revanna. According to police, Devaraje Gowda was arrested at Gulihal tollgate by the Hiriyur police in this district on Friday night for leaking the video in a pen drive.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm