ಬ್ರೇಕಿಂಗ್ ನ್ಯೂಸ್
13-05-24 04:34 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ಅಶ್ಲೀಲ ಪೆನ್ಡ್ರೈವ್ ಪ್ರಕರಣದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 15 ರಂದು ಜರ್ಮನಿಯಿಂದ ಬೆಂಗಳೂರಿಗೆ ಹಿಂತಿರುಗಲು ಕಾಯ್ದಿರಿಸಿದ್ದ ವಿಮಾನದ ಟಿಕೆಟನ್ನು ದಿಢೀರ್ ರದ್ದುಗೊಳಿಸಿದ್ದು ಬಂಧನದ ನಿರೀಕ್ಷೆ ಇಟ್ಟುಕೊಂಡಿದ್ದ ಎಸ್ಐಟಿ ತಂಡವನ್ನು ತಬ್ಬಿಬ್ಬುಗೊಳಿಸಿದ್ದಾರೆ.
ಈವರೆಗೂ ಮೇ 15ರ ವಿಮಾನ ಟಿಕೆಟ್ ಬುಕ್ ಆಗಿದ್ದರಿಂದ ಇನ್ನೆರಡು ದಿನದಲ್ಲಿ ಬರಬಹುದು ಎಂಬ ನಿರೀಕ್ಷೆ ಇತ್ತು. ಹಾಗಿದ್ದರೂ ಎಸ್ಐಟಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಪ್ರಜ್ವಲ್ ವಿದೇಶದಲ್ಲಿ ಅಡಗಿರುವ ಜಾಗವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ ಮೇ 3ರಂದು ನಿಗದಿಯಾಗಿದ್ದ ವಿಮಾನದ ಟಿಕೆಟನ್ನು ಮೇ 15ಕ್ಕೆ ಮುಂದೂಡಿದ್ದರು. ಈಗ ಎರಡು ದಿನ ಇರುವಾಗ ಟಿಕೆಟ್ ರದ್ದುಗೊಳಿಸಿದ್ದು ಎಸ್ಐಟಿ ತಂಡವನ್ನು ದಿಕ್ಕು ತಪ್ಪಿಸಲು ಪ್ರಜ್ವಲ್ ಈ ರೀತಿ ಮಾಡುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಬೆಂಗಳೂರಿನಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ, ಪ್ರಜ್ವಲ್ ಸದ್ಯ ಬೆಂಗಳೂರಿಗೆ ವಾಪಸಾಗುವುದು ಅನುಮಾನ ಎನ್ನಲಾಗುತ್ತಿದೆ.
ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸುವ ಮುನ್ನವೇ ಪ್ರಜ್ವಲ್ ಜರ್ಮನಿಗೆ ಹಾರಿದ್ದರು. ಆನಂತರ, ಬೇರೆ ದೇಶಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು. ಆದರೆ ಯಾವ ದೇಶದಲ್ಲಿ ಅಡಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿದ್ದರೂ ಪ್ರಜ್ವಲ್ ವಿಮಾನ, ಹಡಗಿನಲ್ಲಿ ಪ್ರಯಾಣಿಸದ ಹೊರತು ಎಲ್ಲಿದ್ದಾರೆಂಬ ಬಗ್ಗೆ ಸಣ್ಣ ಸುಳಿವು ಕೂಡ ಎಸ್ಐಟಿಗೆ ಸಿಗಲ್ಲ. ಸದ್ಯಕ್ಕೆ ವಿದೇಶದಲ್ಲಿ ಇರುವುದರಿಂದ ಅವರನ್ನು ಪತ್ತೆ ಹಚ್ಚಿ ಬಂಧಿಸುವುದೇ ಎಸ್ಐಟಿಗೆ ಸವಾಲಾಗಿದೆ.
Prajwal Revanna, an accused in the pornographic pen drive case, has suddenly cancelled the ticket of a flight he had booked to return to Bengaluru from Germany on May 15, much to the consternation of the SIT team that was expecting his arrest.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm