ಬ್ರೇಕಿಂಗ್ ನ್ಯೂಸ್
16-05-24 12:11 am HK News Desk ಕರ್ನಾಟಕ
ಮೈಸೂರು, ಮೇ.16: ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಘೋಷಿತ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಿ ಫಾರಂ ಇಲ್ಲದೆ ಬಂಡಾಯವಾಗಿ ನಾಮಪತ್ರ ಸಲ್ಲಿಸಿದ್ದು ಕುತೂಹಲ ಮೂಡಿಸಿದ್ದಾರೆ.
ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಈ.ಸಿ ನಿಂಗರಾಜೇಗೌಡ ಅವರ ಹೆಸರು ಘೋಷಿಸಲಾಗಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಜೆಡಿಎಸ್ ನಾಯಕರ ಒತ್ತಾಯದಂತೆ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಬಿಜೆಪಿ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ಬುಧವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ, ಮಾತನಾಡಿದ ಡಾ.ಈ.ಸಿ ನಿಂಗರಾಜೇಗೌಡ, ನಾಳೆ ಬೆಳಗ್ಗೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ. ಈ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ತಿಳಿಸಿದ್ದಾರೆ. ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ನನ್ನ ಹೆಸರು ಅಂತಿಮಗೊಳಿಸಲಾಗಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದ್ದಾರೆ.
ಜೆಡಿಎಸ್ಸಿಗೂ ಬಂಡಾಯದ ಬಿಸಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ಗಾಗಿ ವಿವೇಕಾನಂದ ಹಾಗೂ ಕೆ.ಟಿ ಶೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕಾನಂದ ಅವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದೆ. ಇದರಿಂದ ಸಿಟ್ಟುಗೊಂಡ ಕೆ.ಟಿ ಶ್ರೀಕಂಠೇಗೌಡ ಬಂಡಾಯ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶೀಯಲ್ ಮಿಡಿಯಾದಲ್ಲಿ ಪ್ರತಿಕ್ರಿಯಿಸಿರುವ ಅವರು, ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿ ಮತ್ತೊಮ್ಮೆ ನಿಮ್ಮ ಬಳಿ ಬರುತ್ತಿದ್ದೇನೆ. ನನ್ನುನ್ನು ಬೆಂಬಲಿಸಿ. ನಾಳೆ(ಮೇ 16 ) ಬೆಳಿಗ್ಗೆ 11 ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.
The Bharatiya Janata Party (BJP), which had announced candidates to five of the six Legislative Council seats leaving one to its alliance partner the Janata Dal (Secular), will likely give up another seat to its partner making the seat-sharing formula to 4-2. Six Council seats go to polls on June 3.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm