ಬ್ರೇಕಿಂಗ್ ನ್ಯೂಸ್
16-05-24 10:37 pm HK News Desk ಕರ್ನಾಟಕ
ಮೈಸೂರು, ಮೇ 16: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಗುರುವಾರ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಲು ಮುಂದಾಗಿದ್ದರು. ಆದರೆ, ಅದಕ್ಕೂ ಮುನ್ನ ಬೆಂಬಲಿಗರ ಸಭೆ ಕರೆದು ಎಳೆದಾಟ ಉಂಟಾಗಿ ಆಸ್ಪತ್ರೆ ಸೇರಿದ ಘಟನೆ ನಡೆಯಿತು. ಇದರಿಂದಾಗಿ ನಾಮಪತ್ರ ಸಲ್ಲಿಕೆ ಸಾಧ್ಯವಾಗಲಿಲ್ಲ.
ವಿಧಾನ ಪರಿಷತ್ತಿನ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಉದ್ಯಮಿ ವಿವೇಕಾನಂದ ಅವರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಬಿ ಫಾರಂ ನೀಡಿದ್ದರು. ಇದರಿಂದ ಜೆಡಿಎಸ್ ನಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀಕಂಠೇಗೌಡ ತೀವ್ರ ಬೇಸರಗೊಂಡು ಬಂಡಾಯ ಸ್ಪರ್ಧಿಸಲು ಮುಂದಾಗಿದ್ದರು. ಇದಕ್ಕೆ ಸಂಬಂಧಿಸಿ ಮೈಸೂರಿನ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದಿದ್ದ ಗೌಡರು, ಪಕ್ಷೇತರ ಸ್ಪರ್ಧೆಯ ಬಗ್ಗೆ ಹೇಳಿಕೆ ನೀಡಿದ್ದರು.
ಇದೇ ವೇಳೆ, ಜೆಡಿಎಸ್ ಕಾರ್ಯಕರ್ತರು ಶ್ರೀಕಂಠೇಗೌಡ ನಿರ್ಧಾರವನ್ನು ವಿರೋಧಿಸಿದ್ದು, ಪಕ್ಷೇತರ ಸ್ಪರ್ಧೆ ಮಾಡದಂತೆ ಎಳೆದಾಡಿದ್ದಾರೆ. ಇದರಿಂದ ಸಭೆಯಲ್ಲಿ ಗದ್ದಲ ಉಂಟಾಗಿದ್ದು, ಎಳೆದಾಟದಿಂದಾಗಿ ದೈಹಿಕವಾಗಿ ಬಳಲಿದಂತಾಗಿ ಗಾಯಗೊಂಡ ಶ್ರೀಕಂಠೇಗೌಡರನ್ನು ನೇರವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಿಂದ ಇತ್ತ ಬಂಡಾಯ ನಾಮಪತ್ರ ಸಲ್ಲಿಕೆ ಸಾಧ್ಯವಾಗಲಿಲ್ಲ. ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಮೇ 16 ಕಡೆಯ ದಿನವಾಗಿತ್ತು.
ವಿವೇಕಾನಂದ ಆಸ್ತಿ 124 ಕೋಟಿ
ಇದೇ ವೇಳೆ, ಜೆಡಿಎಸ್ ಬಿ ಫಾರಂ ಪಡೆದ ಉದ್ಯಮಿ ವಿವೇಕಾನಂದ ಮೈಸೂರಿನ ಪ್ರಾದೇಶಿಕ ಆಯುಕ್ತರಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಕುಟುಂಬದ ಒಟ್ಟು ಆಸ್ತಿ ಬರೋಬ್ಬರಿ 124.65 ಕೋಟಿ ಇದೆಯೆಂದು ಹೇಳಿಕೊಂಡಿದ್ದಾರೆ. ವಿವೇಕಾನಂದ ಬಳಿ 16.9 ಕೋಟಿ ಚರಾಸ್ತಿ ಇದೆ, ಒಂದು ಆಡಿ ಕಾರು, ಎರಡು ರಾಯಲ್ ಎನ್ ಫೀಲ್ಡ್ ಬೈಕ್ ಇದೆ. ಇವರ ಬಳಿ ಒಂದೂವರೆ ಕೇಜಿ ಚಿನ್ನ, 30 ಕೇಜಿ ಬೆಳ್ಳಿ ಇದೆ. ಇದೇ ವೇಳೆ, ಪತ್ನಿ ಬಳಿ 61 ಲಕ್ಷ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಒಂದು ಕೇಜಿ ಚಿನ್ನ, ಹತ್ತು ಕೇಜಿ ಬೆಳ್ಳಿ, ಮರ್ಸಿಡಿಸ್ ಬೆಂಜ್ ಕಾರನ್ನು ಹೊಂದಿದ್ದಾರೆ. ಇದಲ್ಲದೆ, ವಿವೇಕಾನಂದ ಬಳಿ ನೂರು ಕೋಟಿ ಮೌಲ್ಯದ ಕೃಷಿ ಜಮೀನು, ಕಮರ್ಶಿಯಲ್ ಕಟ್ಟಡಗಳಿವೆ. ಬೆಂಗಳೂರು, ಮೈಸೂರಿನಲ್ಲಿ ಎರಡೆರಡು ವಾಸದ ಮನೆಗಳಿವೆ.
Disgruntled JD(S) leader and former MLC K.T. Srikantegowda called for a meeting of his supporters after being denied the ticket to contest. The Constituency, spanning Mysuru, Mandya, Hassan and Chamarajanagar districts, has over 20,000 voters.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm