ಬ್ರೇಕಿಂಗ್ ನ್ಯೂಸ್
16-05-24 10:37 pm HK News Desk ಕರ್ನಾಟಕ
ಮೈಸೂರು, ಮೇ 16: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಗುರುವಾರ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಲು ಮುಂದಾಗಿದ್ದರು. ಆದರೆ, ಅದಕ್ಕೂ ಮುನ್ನ ಬೆಂಬಲಿಗರ ಸಭೆ ಕರೆದು ಎಳೆದಾಟ ಉಂಟಾಗಿ ಆಸ್ಪತ್ರೆ ಸೇರಿದ ಘಟನೆ ನಡೆಯಿತು. ಇದರಿಂದಾಗಿ ನಾಮಪತ್ರ ಸಲ್ಲಿಕೆ ಸಾಧ್ಯವಾಗಲಿಲ್ಲ.
ವಿಧಾನ ಪರಿಷತ್ತಿನ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಉದ್ಯಮಿ ವಿವೇಕಾನಂದ ಅವರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಬಿ ಫಾರಂ ನೀಡಿದ್ದರು. ಇದರಿಂದ ಜೆಡಿಎಸ್ ನಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀಕಂಠೇಗೌಡ ತೀವ್ರ ಬೇಸರಗೊಂಡು ಬಂಡಾಯ ಸ್ಪರ್ಧಿಸಲು ಮುಂದಾಗಿದ್ದರು. ಇದಕ್ಕೆ ಸಂಬಂಧಿಸಿ ಮೈಸೂರಿನ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದಿದ್ದ ಗೌಡರು, ಪಕ್ಷೇತರ ಸ್ಪರ್ಧೆಯ ಬಗ್ಗೆ ಹೇಳಿಕೆ ನೀಡಿದ್ದರು.

ಇದೇ ವೇಳೆ, ಜೆಡಿಎಸ್ ಕಾರ್ಯಕರ್ತರು ಶ್ರೀಕಂಠೇಗೌಡ ನಿರ್ಧಾರವನ್ನು ವಿರೋಧಿಸಿದ್ದು, ಪಕ್ಷೇತರ ಸ್ಪರ್ಧೆ ಮಾಡದಂತೆ ಎಳೆದಾಡಿದ್ದಾರೆ. ಇದರಿಂದ ಸಭೆಯಲ್ಲಿ ಗದ್ದಲ ಉಂಟಾಗಿದ್ದು, ಎಳೆದಾಟದಿಂದಾಗಿ ದೈಹಿಕವಾಗಿ ಬಳಲಿದಂತಾಗಿ ಗಾಯಗೊಂಡ ಶ್ರೀಕಂಠೇಗೌಡರನ್ನು ನೇರವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಿಂದ ಇತ್ತ ಬಂಡಾಯ ನಾಮಪತ್ರ ಸಲ್ಲಿಕೆ ಸಾಧ್ಯವಾಗಲಿಲ್ಲ. ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಮೇ 16 ಕಡೆಯ ದಿನವಾಗಿತ್ತು.
ವಿವೇಕಾನಂದ ಆಸ್ತಿ 124 ಕೋಟಿ
ಇದೇ ವೇಳೆ, ಜೆಡಿಎಸ್ ಬಿ ಫಾರಂ ಪಡೆದ ಉದ್ಯಮಿ ವಿವೇಕಾನಂದ ಮೈಸೂರಿನ ಪ್ರಾದೇಶಿಕ ಆಯುಕ್ತರಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಕುಟುಂಬದ ಒಟ್ಟು ಆಸ್ತಿ ಬರೋಬ್ಬರಿ 124.65 ಕೋಟಿ ಇದೆಯೆಂದು ಹೇಳಿಕೊಂಡಿದ್ದಾರೆ. ವಿವೇಕಾನಂದ ಬಳಿ 16.9 ಕೋಟಿ ಚರಾಸ್ತಿ ಇದೆ, ಒಂದು ಆಡಿ ಕಾರು, ಎರಡು ರಾಯಲ್ ಎನ್ ಫೀಲ್ಡ್ ಬೈಕ್ ಇದೆ. ಇವರ ಬಳಿ ಒಂದೂವರೆ ಕೇಜಿ ಚಿನ್ನ, 30 ಕೇಜಿ ಬೆಳ್ಳಿ ಇದೆ. ಇದೇ ವೇಳೆ, ಪತ್ನಿ ಬಳಿ 61 ಲಕ್ಷ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಒಂದು ಕೇಜಿ ಚಿನ್ನ, ಹತ್ತು ಕೇಜಿ ಬೆಳ್ಳಿ, ಮರ್ಸಿಡಿಸ್ ಬೆಂಜ್ ಕಾರನ್ನು ಹೊಂದಿದ್ದಾರೆ. ಇದಲ್ಲದೆ, ವಿವೇಕಾನಂದ ಬಳಿ ನೂರು ಕೋಟಿ ಮೌಲ್ಯದ ಕೃಷಿ ಜಮೀನು, ಕಮರ್ಶಿಯಲ್ ಕಟ್ಟಡಗಳಿವೆ. ಬೆಂಗಳೂರು, ಮೈಸೂರಿನಲ್ಲಿ ಎರಡೆರಡು ವಾಸದ ಮನೆಗಳಿವೆ.
Disgruntled JD(S) leader and former MLC K.T. Srikantegowda called for a meeting of his supporters after being denied the ticket to contest. The Constituency, spanning Mysuru, Mandya, Hassan and Chamarajanagar districts, has over 20,000 voters.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm