ಬ್ರೇಕಿಂಗ್ ನ್ಯೂಸ್
18-05-24 08:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ.
ಆರೋಪಿಯನ್ನು ಆನೆಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. 15 ವರ್ಷದ ತಮ್ಮ ಪ್ರಾಣೇಶ್ ಮೊಬೈಲ್ ತೆಗೆದುಕೊಂಡು ದಿನವಿಡೀ ಗೇಮ್ ಆಡಿದ್ದಕ್ಕೆ ಆಕ್ರೋಶಗೊಂಡು ಆತನನ್ನು ಕೊಂದಿರುವುದಾಗಿ ಶಿವಕುಮಾರ್ ಸರ್ಜಾಪುರ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.
ಮೇ 15 ರಂದು ಏಳನೇ ತರಗತಿಯ ವಿದ್ಯಾರ್ಥಿ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದ. ಪೋಷಕರು ಮಗನಿಗಾಗಿ ಹುಡುಕಾಟ ಆರಂಭಿಸಿದ ಬಳಿಕ ಶಿವಕುಮಾರ್, ಪ್ರಾಣೇಶ್ ನನ್ನು ಯಾರೋ ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಶವ ನೋಡಿರುವುದಾಗಿ ಹೇಳಿದ್ದಾನೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಸರ್ಜಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು ವಿಚಾರಣೆ ವೇಳೆ ಶಿವಕುಮಾರ್ ಹೇಳಿಕೆ ಬದಲಾಯಿಸಿದ್ದಾನೆ. ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ನಿಜ ವಿಷಯ ಬಾಯಿ ಬಿಟ್ಟಿದ್ದಾನೆ.
ಶಿವಕುಮಾರ್ ತಮ್ಮನ ತಲೆ ಮತ್ತು ಹೊಟ್ಟೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ಸುತ್ತಿಗೆಯನ್ನ ತೆಗೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ
ಆಂಧ್ರದ ಕರ್ನೂಲ್ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆಯಿದ್ದ ಹಿನ್ನೆಲೆ ಬೆಂಗಳೂರಿನ ಮನೆಗೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್ನ ಮೊಬೈಲ್ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್ಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪ್ರಾಣೇಶ್ತಲೆ, ಹೊಟ್ಟೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
Bangalore elder brother kills brother for using his mobile phone to play games. The arrested has been identified as Shivakumar.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm