ಬ್ರೇಕಿಂಗ್ ನ್ಯೂಸ್
22-05-24 11:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.22: ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲೂ ಸಜ್ಜಾಗಿರಬೇಕು. ಮಳೆ ಬಂದಾಗ ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿರುವುದು ಕಂಡು ಬಂದರೆ ಸಂಬಂಧಪಟ್ಟ ಎಂಜಿನಿಯರ್ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ನಗರದಲ್ಲಿ ಜೋರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಡಿಸಿಎಂ, ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಕೈಗೊಂಡ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, '' ಜೂನ್ನಿಂದ ಮುಂಗಾರು ಆರಂಭವಾಗಲಿದೆ. ವಾಡಿಕೆಗಿಂತ ಹೆಚ್ಚು ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗುವ ಮುನ್ಸೂಚನೆ ಇದೆ. ಹೀಗಾಗಿ, ಚುನಾವಣಾ ಆಯೋಗದಿಂದ ಅನುಮತಿ ಪಡೆದು ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ,'' ಎಂದರು.



ಬಿಬಿಎಂಪಿ, ಜಲಮಂಡಳಿ, ಬಿಡಿಎ, ಬೆಸ್ಕಾಂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಒಣ ಹಾಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು, ರೆಂಬೆ-ಕೊಂಬೆಗಳನ್ನು ಅನಾಹುತ ಸಂಭವಿಸುವುದಕ್ಕೆ ಮುನ್ನವೇ ತೆರವುಗೊಳಿಸಬೇಕು. ಪಾದಚಾರಿ ಮಾರ್ಗಗಳ ದುರಸ್ತಿ, ಕಾಲುವೆಗಳಲ್ಲಿಹೂಳು ತೆರವು ಕೈಗೊಂಡು, ಕಾಲುವೆಗಳಿಗೆ ಕಸ ಹಾಕುವುದನ್ನು ತಡೆಯಬೇಕು. ಮೆಟ್ರೊ, ಮೇಲ್ಸೇತುವೆ ಕಾಮಗಾರಿಗಳ ಸ್ಥಳದಲ್ಲಿಬಿದ್ದಿರುವ ಅವಶೇಷಗಳನ್ನು ತೆರವು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ,'' ಎಂದು ಹೇಳಿದರು.
ಗಾಳಿ ಆಂಜನೇಯ ದೇವಸ್ಥಾನ ಬಳಿಯ ರಾಜಕಾಲುವೆಯಲ್ಲಿಮಳೆ ಬಂದಾಗ ಪ್ರವಾಹ ಉಂಟಾಗುವುದನ್ನು ತಡೆಯಲು 11.50 ಕೋಟಿ ರೂ. ವೆಚ್ಚದಲ್ಲಿರೂಪಿಸಿರುವ ಸಮಾನಾಂತರ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ರಾಜಕಾಲುವೆಗೆ ಜನರು ಕಸ ಎಸೆಯುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಅಮಾನತು ಮಾಡಬೇಕಾಗುತ್ತದೆ,'' ಎಂದು ಮುಖ್ಯ ಎಂಜಿನಿಯರ್ಗೆ ಸಿಎಂ ಎಚ್ಚರಿಕೆ ನೀಡಿದರು.
With the onset of monsoon and the heavy rains during the last few days causing problems in some parts of the city, Chief Minister Siddaramaiah along with Deputy Chief Minister D K Shivakumar took a round of inspection in different wards and also the review the progress of various ongoing works.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm