ಬ್ರೇಕಿಂಗ್ ನ್ಯೂಸ್
23-05-24 02:07 pm HK NEWS ಕರ್ನಾಟಕ
ಬೆಂಗಳೂರು, ಮೇ 23: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಹೋಟೆಲ್ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ನಗರದ ಮೂರು ಹೋಟೆಲ್ಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿವೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ.
ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಇದರಂತೆ ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದರು.

ಬಳಿಕ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಆರಂಂಭಿಸಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.
ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ಏರ್ಪಟ್ಟಿತ್ತು. ಬಳಿಕ ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದರು.
ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳಿಗೆ ಅಗತ್ಯವಾದ ರಕ್ಷಣೆ, ಘಟನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಜೊತೆಗೆ ಈ ಹೋಟೆಲ್ಗಳಲ್ಲಿ ಯಾವುದೇ ಸ್ಪೋಟಕ, ಬಾಂಬ್ ನಂತಹ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಭಯ ನೀಡಿದರು.ನಂತರ ಹೋಟೆಲ್ನಲ್ಲಿ ತಂಗಿದ್ದವರು, ಹೋಟೆಲ್ ಸಿಬ್ಬಂದಿ ಮತ್ತು ಮಾಲೀಕರು ನಿಟ್ಟುಸಿರು ಬಿಟ್ಟರು.
ಈ ಸಂಬಂಧ ಆಗ್ನೇಯ ವಿಭಾಗದ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ಹಿಂದೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಲಾಗಿತ್ತು. ಅದಾದ ಬಳಿಕ ಇಂತಹ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹುಟ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ.
The Bengaluru police on Thursday said three well-known hotels in Bengaluru received emails threatening a bomb blast. These hotels include The Oterra, said DCP South East Bengaluru.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm