ಬ್ರೇಕಿಂಗ್ ನ್ಯೂಸ್
23-05-24 10:58 pm Bengaluru Correspondent ಕರ್ನಾಟಕ
Photo credits : News First Kannada
ಬೆಂಗಳೂರು, ಮೇ 23: ವೈದ್ಯರ ನಿರ್ಲಕ್ಷ್ಯ ಮತ್ತು ಖಾಸಗಿ ಆಸ್ಪತ್ರೆಯ ಹಣದಾಹಕ್ಕೆ ಬಾಣಂತಿ ಪ್ರಾಣ ಕಳೆದುಕೊಂಡಿರುವ ಆರೋಪ ಕೇಳಿ ಬಂದಿದೆ. ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಕ್ಲೌಡ್ ನೈನ್ ಆಸ್ಪತ್ರೆ ವಿರುದ್ಧ ಮಹಿಳೆಯ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕ್ಲೌಡ್ ನೈನ್ ಆಸ್ಪತ್ರೆಯ ವೈದ್ಯರು ಜನನಿ ಎಂಬ ಮಹಿಳೆಗೆ ಅವಧಿಗೆ ಮುಂಚೆ ಅಂದ್ರೆ 65 ದಿನಗಳ ಮುನ್ನವೇ ಆಪರೇಷನ್ ಮಾಡಿಸಿದ್ದಾರಂತೆ. ಗರ್ಭಿಣಿಯಾಗಿದ್ದ ಜನನಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದಾದ ಮೇಲೆ ನಡೆದಿದ್ದು ನಿಜಕ್ಕೂ ಘನಘೋರ ದುರಂತ. ಕ್ಲೌಡ್ ನೈನ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ 20 ದಿನ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ ಜನನಿ ಸಾವನ್ನಪ್ಪಿದ್ದಾರೆ. ಇದೀಗ ಬಾಣಂತಿಯ ಮೃತದೇಹ ಕೊಡಲು ಮತ್ತೆ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಲಾಗಿದೆ.
ಗರ್ಭಿಣಿಯಾಗಿದ್ದ ಜನನಿಗೆ ಜುಲೈ-5ಕ್ಕೆ ಡೆಲಿವರಿ ಡೇಟ್ ನೀಡಲಾಗಿತ್ತು. ಆದರೆ ಮೇ 2ಕ್ಕೆ ಕ್ಲೌವ್ಡ್ ನೈನ್ ಆಸ್ಪತ್ರೆಯಲ್ಲಿ ಅವಧಿಗೂ ಮುನ್ನವೇ ಅಂದ್ರೆ ಎರಡು ತಿಂಗಳ ಮೊದಲೇ ವೈದ್ಯರು ಡೆಲಿವರಿ ಮಾಡಿದ್ರಂತೆ. ಈ ವೇಳೆ ಇಂಟರ್ನೆಲ್ ಬ್ಲೀಡಿಂಗ್ ಆಗಿ ತಾಯಿ ಸ್ಥಿತಿ ಚಿಂತಾಜನಕವಾಗಿದೆ. ಈ ಬಗ್ಗೆ ಜನನಿ ಗಂಡನಿಗೂ ವೈದ್ಯರು ಯಾವುದೇ ಮಾಹಿತಿ ನೀಡಿಲ್ಲವಂತೆ.
ತಾಯಿ ಚಿಂತಾಜನಕ ಸ್ಥಿತಿಯಲ್ಲಿದ್ದಾಗ ಕ್ಲೌವ್ಡ್ ನೈನ್ ಆಸ್ಪತ್ರೆ ವೈದ್ಯರು ಮತ್ತೊಂದು ಯಡವಟ್ಟು ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬಾಣಂತಿಯನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಜನನಿ 20 ದಿನ ಹೋರಾಡಿ ಕೊನೆಯುಸಿರೆಳೆದಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಜನನಿ ಮಣಿಪಾಲ್ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಬಾಣಂತಿಯ ಮೃತದೇಹ ಕೊಡಲು ಮಣಿಪಾಲ್ ಆಸ್ಪತ್ರೆಯವರು ಹಿಂದೇಟು ಹಾಕಿದ್ದರಂತೆ. 10 ಲಕ್ಷ ರೂಪಾಯಿ ಕೊಟ್ಟು ಮೃತದೇಹ ತಗೆದುಕೊಂಡು ಹೋಗಿ ಅಂತ ಮಣಿಪಾಲ್ ಆಸ್ಪತ್ರೆಯವರು ಹೇಳಿದ್ದಾರಂತೆ

ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಕ್ಲೌಡ್ ನೈನ್ ಆಸ್ಪತ್ರೆ ವಿರುದ್ಧ ಮಹಿಳೆಯ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಆರೋಗ್ಯ ಅಧಿಕಾರಿಗಳು ಮಣಿಪಾಲ್ ಆಸ್ಪತ್ರೆಯ ಆಡಳಿತ ಮಂಡಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಣದ ಕಾರಣಕ್ಕೆ ಮೃತದೇಹವನ್ನು ಪೆಂಡಿಂಗ್ ಇಡುವಂತಿಲ್ಲ. ಮೊದಲು ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಿ. ಆಮೇಲೆ ಹಣದ ವ್ಯವಹಾರ ಮಾಡಿ ಎಂದು ಸೂಚನೆ ನೀಡಲಾಗಿದೆ. ಆರೋಗ್ಯ ಅಧಿಕಾರಿಗಳು ಆಸ್ಪತ್ರೆ ಮಂಡಳಿಗೆ ತರಾಟೆ ತೆಗೆದುಕೊಂಡ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ.
ಜನನಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಹಾಗೂ ಕ್ಲೌಲ್ಡ್ ನೈನ್ ಆಸ್ಪತ್ರೆ ನಿರ್ಲಕ್ಷ್ಯದ ಬಗ್ಗೆ ಕುಟುಂಬಸ್ಥರು ದೂರು ನೀಡಿದ್ದಾರೆ. ಈ ಬಗ್ಗೆ ಇಬ್ಬರು ವೈದ್ಯರೊನ್ನೊಳಗೊಂಡ ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ನೀಡುವ ವರದಿ ಆಧಾರದ ಮೇಲೆ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.
Pregnant Woman Die in hospital, 10 lakhs demanded for body, case against Cloudnine Hospital, and KMC have been registered in Bangalore. Deceased Janani has given birth to twin kids and has breathed her last due to Doctors negligence, alleges the family of the deceased.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm