ಬ್ರೇಕಿಂಗ್ ನ್ಯೂಸ್
24-05-24 06:35 pm HK News Desk ಕರ್ನಾಟಕ
ಬಾಗಲಕೋಟೆ, ಮೇ.24: ಸತ್ತು ಹೋಗಿದೆ ಎಂದು ತಿಳಿದು ಹಸುಗೂಸು ಮಗುವನ್ನು ಇನ್ನೇನು ಅಂತ್ಯಸಂಸ್ಕಾರ ಮಾಡಬೇಕು ಎಂದು ತಯಾರಿ ನಡೆಸುತ್ತಿದ್ದಾಗಲೇ ಪವಾಡವೆಂಬಂತೆ ಮಗು ಕೆಮ್ಮಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ ಗುರುವಾರ ಈ ಘಟನೆ ನಡೆದಿದೆ. ಮಗು ಪ್ರಜ್ಞೆ ತಪ್ಪಿದ್ದನ್ನು ಸತ್ತಿದೆಯೆಂದು ಭಾವಿಸಿದ ಕುಟುಂಬ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದು ಅಷ್ಟರಲ್ಲೇ ಮಗು ಕೆಮ್ಮಿದೆ. ಇದರಿಂದ ಕುಟುಂಬ ಎದೆ ಬಡಿದುಕೊಂಡು ಗೋಳಾಡಿ ಮಗು ಜೀವಂತ ಇರುವುದನ್ನು ತಿಳಿದು ಕಣ್ಣೀರು ಹಾಕಿದೆ.
ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ಎಂಬ ದಂಪತಿಯ ದ್ಯಾಮಣ್ಣ ಭಜಂತ್ರಿ ಎಂಬ 13 ತಿಂಗಳ ಹಸುಗೂಸು ಹೃದಯ ಸಂಬಂಧಿ ಕಾಯಿಲೆಯಿಂದ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿತ್ತು. ಇದರಿಂದಾಗಿ ಮಗುವಿಗೆ ಅಂಗಾಗ ವೈಫಲ್ಯವೂ ಇತ್ತು. ಹೀಗಾಗಿ ಕೆಲ ದಿನಗಳ ಹಿಂದೆ ಮಗುವನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕುವುದು ಕಷ್ಟ ಎಂದು ಹೇಳಿದಾಗ ಪೋಷಕರು ಮಗುವನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಮಗು ಪ್ರಜ್ಞೆ ತಪ್ಪಿತ್ತು. ಇದರಿಂದ ಮಗು ಸಾವನ್ನಪ್ಪಿದೆ ಎಂದು ಭಾವಿಸಿದ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅಷ್ಟರಲ್ಲಿ ಮಗು ಕೆಮ್ಮಿದ್ದು ತಾನಿನ್ನೂ ಸತ್ತಿಲ್ಲ ಎಂದು ತೋರಿಸಿಕೊಟ್ಟಿದೆ. ಇದರಿಂದ ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ.
ಇದನ್ನು ದೇವರ ಪವಾಡ ಎಂದು ಭಾವಿಸಿ ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದು ಮುರ್ತುಜಾ ಖಾದ್ರಿ ಪವಾಡ ಎಂದು ಭಾವಿಸಿ ಪೋಷಕರು ಮಗುವನ್ನು ದರ್ಗಾಕ್ಕೆ ಕರೆದೊಯ್ದು ನಂತರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಆಸ್ಪತ್ರೆ ವೈದ್ಯರು, 'ಮಗು ಬದುಕುವುದು ಕಷ್ಟ ಎಂದು ಮಾತ್ರ ಬಾಗಲಕೋಟೆ ಖಾಸಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಆದರೆ ಅದು ಮೃತಪಟ್ಟಿದೆ ಎಂದು ಯಾವ ವೈದ್ಯರೂ ಘೋಷಣೆ ಮಾಡಿಲ್ಲ. ಆದರೆ ಕುಟುಂಬಸ್ಥರು ಮಗು ಪ್ರಜ್ಞೆ ತಪ್ಪಿಧ್ದನ್ನೇ ತಪ್ಪಾಗಿ ಭಾವಿಸಿ ಅದು ಮೃತಪಟ್ಟಿದೆ ಎಂದು ಅರ್ಥೈಸಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ನಾವು ಮಗುವಿಗೆ ಚಿಕಿತ್ಸೆ ನೀಡುತ್ತಿದ್ದೇವೆ' ಎಂದಿದ್ದಾರೆ.
Dead' 13 Months Baby Comes Alive Seconds Before Cremation In Bagalkot. The baby suffering from multiorgan failure was admitted to a private hospital. The baby went unconscious while the parents were returning home. The video of this has gone viral on social media.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm